ಸಿದ್ದರಾಮಯ್ಯಗೆ ಮುಡಾ ರಿಲೀಫ್: ಸತ್ಯವೇ ಗೆದ್ದಿದೆ ಎಂದ ರಣದೀಪ್ ಸುರ್ಜೇವಾಲ

Krishnaveni K
ಸೋಮವಾರ, 21 ಜುಲೈ 2025 (17:10 IST)
ಬೆಂಗಳೂರು: ಮುಡಾ ಹಗರಣದ  ವಿಚಾರಣೆ ಕೋರಿ ಇಡಿ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದ ಬೆನ್ನಲ್ಲೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಲಾ ಸತ್ಯವೇ ಗೆದ್ದಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು ‘ಕರ್ನಾಟಕ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಸುಳ್ಳು ಆರೋಪಗಳನ್ನು ಹುಟ್ಟುಹಾಕಿತ್ತು. ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಎಂಬ ಸುಳ್ಳು ಆರೋಪ ಮುಂದಿಟ್ಟುಕೊಂಡು ಬಿಜೆಪಿಯು ತಿಂಗಳುಗಟ್ಟಲೆ ಪ್ರತಿಭಟನೆ ನಡೆಸಿತ್ತು.

ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ವಿರುದ್ಧ ರಾಜ್ಯಪಾಲರ ಕಚೇರಿಯನ್ನು ದುರುಪಯೋಗಪಡಿಸಿಕೊಂಡಿತ್ತು. ಅಲ್ಲದೇ ಜಾರಿ ನಿರ್ದೇಶನಾಲಯವನ್ನು (ಇಡಿ) ಸಿದ್ದರಾಮಯ್ಯ ಹಾಗೂ ಅವರ ಪತ್ನಿ ವಿರುದ್ಧ ಛೂ ಬಿಟ್ಟಿತ್ತು. ಸಿದ್ದರಾಮಯ್ಯ ಹಾಗೂ ಅವರ ಪತ್ನಿ ವಿರುದ್ಧ ದುರುದ್ದೇಶಪೂರ್ವಕವಾಗಿ ಸುಳ್ಳು ಆರೋಪ ಮಾಡಿ ಕಿರುಕುಳ ನೀಡಲು ಯತ್ನಿಸಿತ್ತು.

ಆದರೆ, ಇಂದು ಸುಪ್ರೀಂ ಕೋರ್ಟ್ ಇಡಿ-ಬಿಜೆಪಿಯ ಪಾಲುದಾರಿಕೆಯ ಸುಳ್ಳು ಹಾಗೂ ದುರುದ್ದೇಶದ ಅಪ ಪ್ರಚಾರವನ್ನು ತಿರಸ್ಕರಿಸಿದ್ದು, ಅವರ ಅರ್ಜಿಯನ್ನು ರದ್ದುಗೊಳಿಸಿದೆ. ಹಿಂದೆ ಹೈಕೋರ್ಟ್ ನೀಡಿದ್ದ ನ್ಯಾಯಯುತ ತೀರ್ಪನ್ನು ಎತ್ತಿ ಹಿಡಿದಿದೆ. ಅಂತಿಮವಾಗಿ ಸತ್ಯ ಗೆದ್ದಿದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಡಿಪಾರು ಆದೇಶದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿಗೆ ಬಿಗ್ ಶಾಕ್

ರಾಮಮಂದಿರ ದೇಣಿಗೆ ದುರುಪಯೋಗ: ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಖಲಿಸ್ತಾನ್ ಗುಂಪಿನಿಂದ ಕೊಲೆ ಬೆದರಿಕೆ: ಭದ್ರತೆಯಲ್ಲಿ ಮಹತ್ವದ ಬದಲಾವಣೆ

ಮಕ್ಕಳಾಗಿಲ್ಲವೆಂದು ಸೊಸೆಯೊಬ್ಬಳನ್ನು ಈ ರೀತಿ ನಡೆಸಿಕೊಳ್ಳುವುದಾ, ಹೀನಾಯ ಘಟನೆ, Video

ಡಿಕೆ ಶಿವಕುಮಾರ್ ಇಡೀ ರಾಜ್ಯದ ಸಿಎಂ, ಅದು ಮರೆಯಬಾರದು: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments