Webdunia - Bharat's app for daily news and videos

Install App

ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿರುವ ರಂಗನತಿಟ್ಟು

Webdunia
ಸೋಮವಾರ, 7 ಮಾರ್ಚ್ 2022 (06:20 IST)
ಮಂಡ್ಯ : ಬೇಸಿಗೆ ಬಂತು ಅಂದ್ರೆ ಸಾಕು ಜನರು ಬೀಚ್ಗಳ ಕಡೆ ಮುಖ ಮಾಡ್ತಾರೆ. ಆದ್ರೆ ರಂಗನತಿಟ್ಟು ಪಕ್ಷಿಧಾಮ ಬೇಸಿಗೆಯಲ್ಲೂ ತನ್ನ ಸೌಂದರ್ಯದಿಂದ ಪ್ರವಾಸಿಗರನ್ನು ತನ್ನತ್ತ ಕೈ ಬೀಸಿ ಸೆಳೆಯುತ್ತಿದೆ.
 
ನೀರಿನ ಮಧ್ಯೆ ಬಣ್ಣ-ಬಣ್ಣದ ಪಕ್ಷಿಗಳ ಕಲರವ, ಗೂಡು ನಿರ್ಮಾಣಕ್ಕೆ ಕಡ್ಡಿಗಳನ್ನು ತರುತ್ತಿರುವ ಕೆಲ ಪಕ್ಷಿಗಳು, ತನ್ನ ಮರಿಗಳನ್ನು ಸಂರಕ್ಷಣೆ ಮಾಡುತ್ತಿರುವ ತಾಯಿ, ಸಂತಾನೋತ್ಪತ್ತಿ ಮಾಡುತ್ತಿರುವ ಜೋಡಿ ಹಕ್ಕಿಗಳು, ಮೀನಿನ ಭೇಟೆಗಾಗಿ ಹೊಂಚು ಹಾಕುತ್ತಿರುವ ಮತ್ತಷ್ಟು ಪಕ್ಷಿಗಳು, ಈ ಮಧ್ಯ ಭಯ ಹುಟ್ಟಿಸುವ ಹಾಗೆ ಮಲಗಿರುವ ಮೊಸಳೆಗಳು, ನೀರಿನಲ್ಲಿ ಮುಳುಗೇಳುತ್ತಿರುವ ನೀರು ನಾಯಿ.

ಈ ದೃಶ್ಯ ಕಾಣಲು ಸಿಗುವುದು ರಂಗನತಿಟ್ಟು ಪಕ್ಷಿಧಾಮದಲ್ಲಿ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ರಂಗನತಿಟ್ಟು ಪಕ್ಷಿಧಾಮ ಬೇಸಿಗೆಗಾಲದಲ್ಲೂ ಪಕ್ಷಿಗಳ ಕಲರವ ಹಾಗೂ ಕಾವೇರಿ ತಾಯಿಯಿಂದ ಕಂಗೊಳಿಸುತ್ತಿದೆ. 

ಸದ್ಯ ರಂಗನತಿಟ್ಟು ಪಕ್ಷಿಧಾಮಕ್ಕೆ ಡಿಸೆಂಬರ್ ತಿಂಗಳಿನಿಂದ ಮೇ ತಿಂಗಳವರೆಗೆ ದೇಶ-ವಿದೇಶದಿಂದ ಆಹಾರಕ್ಕಾಗಿ ಹಾಗೂ ಸಂತಾನೋತ್ಪತ್ತಿಗಾಗಿ ಬರುತ್ತವೆ. ಹೀಗಾಗಿ ಈ ಆರು ತಿಂಗಳ ಕಾಲ ರಂಗನತಿಟ್ಟು ಪಕ್ಷಿಧಾಮದಕ್ಕೆ ಪ್ರಕೃತಿ ದೇವತೆಯೇ ಧರಗೆ ಇಳಿದು ಬಂದ ಹಾಗೆ ಭಾವಿಸುತ್ತದೆ.

ಈಗ ಪೆಲಿಕಾನ್, ಓಪನ್ ಬಿಲ್ ಸ್ಟಾರ್ಕ್, ಸ್ಫೂನ್ ಬಿಲ್, ಕಾರ್ಮಾರೆಂಟ್, ಐಬಿಸ್, ಇಗ್ರೀಟ್, ಕಿಂಗ್ ಫಿಶರ್, ಪೆಂಟೆಂಡ್ ಸ್ಟಾಕ್ ಸೇರಿದಂತೆ 170 ಬಗೆಯ ಲಕ್ಷಾಂತರ ಪಕ್ಷಿಗಳು ರಂಗತಿಟ್ಟಿನ 25 ನಡುಗಡ್ಡೆಗಳಲ್ಲಿ ವಾಸ ಮಾಡುತ್ತಿವೆ. ಇದಲ್ಲದೇ ರಂಗನತಿಟ್ಟಿನಲ್ಲಿ 100ಕ್ಕೂ ಹೆಚ್ಚು ಮೊಸಳೆಗಳು ಸಹ ವಾಸವಾಗಿದ್ದು, ಅಲ್ಲಲ್ಲಿ ಕಾಡು ನಾಯಿಗಳು ನೀರಿನಲ್ಲಿ ಮುಳುಗೇಳುವ ದೃಶ್ಯಗಳು ಸಹ ಗೋಚರಿಸುತ್ತಿದೆ.

ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಪ್ರತಿ ದಿನ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ರಂಗನತಿಟ್ಟು ಪಕ್ಷಿಧಾಮಕ್ಕೆ ಹರಿದು ಬರುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

Seemanth Kumar: ಬೆಂಗಳೂರು ಹೊಸ ಕಮಿಷನರ್ ಸೀಮಂತ ಕುಮಾರ್ ಎಲ್ಲಿಯವರು, ಅವರ ಹಿನ್ನಲೆಯೇನು

ಮುಂದಿನ ಸುದ್ದಿ
Show comments