Webdunia - Bharat's app for daily news and videos

Install App

ಪ್ರವಾಸಿಗರಿಗೆ ನಿರಾಸೆ ಮೂಡಿಸಿದ ರಂಗನತಿಟ್ಟು ಪಕ್ಷಿಧಾಮ : ಬೋಟಿಂಗ್ ಸ್ಥಗಿತ?

Webdunia
ಶುಕ್ರವಾರ, 18 ಆಗಸ್ಟ್ 2023 (07:19 IST)
ಮಂಡ್ಯ : ಒಂದು ಕಡೆ ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಕೆಆರ್ಎಸ್ ಡ್ಯಾಂನಿಂದ ತಮಿಳುನಾಡಿಗೆ 10 ಸಾವಿರ ಕ್ಯೂಸೆಕ್ಗೂ ಅಧಿಕ ಪ್ರಮಾಣದಲ್ಲಿ ನೀರು ಹರಿಸುತ್ತಿರೋದಕ್ಕೆ ತೀವ್ರ ವಿರೋಧ ವ್ಯಕ್ತವಾಗ್ತಿದೆ.
 
ಈ ನಡುವೆ ಕಾವೇರಿ ನದಿ ನೀರು ಹೆಚ್ಚು ಪ್ರಮಾಣದಲ್ಲಿ ಹರಿಯುತ್ತಿರೋದ್ರಿಂದ ಪ್ರವಾಸಿಗರಲ್ಲಿ ತೀವ್ರ ನಿರಾಸೆ ಮೂಡುತ್ತಿದೆ. ಹೌದು. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಡ್ಯಾಂನಿಂದ ಸಂಕಷ್ಟದ ಸೂತ್ರ ಅನುಸರಿಸಿ ತಮಿಳುನಾಡಿಗೆ ನೀರು ಹರಿಸುವ ಬದಲು ರಾಜ್ಯ ಸರ್ಕಾರ ತಮಿಳುನಾಡಿಗೆ ಸದ್ಯ 13 ಸಾವಿರ ಕ್ಯೂಸೆಕ್ಗೂ ಅಧಿಕ ಪ್ರಮಾಣದ ನೀರು ಹರಿಸುತ್ತಿದೆ.

ಇದು ರೈತರಿಗೆ ಹಾಗೂ ಜನರಲ್ಲಿ ಆಕ್ರೋಶವನ್ನು ಉಂಟು ಮಾಡಿದೆ. ಇತ್ತ ಕಾವೇರಿ ನದಿಗೆ ಕಳೆದ ಮೂರು ದಿನಗಳಿಂದ 10 ಸಾವಿರ ಕ್ಯೂಸೆಕ್ಗೂ ಅಧಿಕ ಪ್ರಮಾಣದಲ್ಲಿ ನೀರು ಬಿಟ್ಟಿರುವ ಕಾರಣ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮದಲ್ಲಿ ದೋಣಿ ವಿಹಾರ ತಾತ್ಕಾಲಿಕವಾಗಿ ಬಂದ್ ಆಗಿದೆ.

ಕೆಆರ್ಎಸ್ ಡ್ಯಾಂನಿಂದ ಕಾವೇರಿ ನದಿಗೆ 10 ಸಾವಿರಕ್ಕೂ ಅಧಿಕ ಪ್ರಮಾಣದಲ್ಲಿ ನೀರು ಬಿಟ್ರೆ ರಂಗನತಿಟ್ಟು ಪಕ್ಷಿಧಾಮದ ಬೋಟಿಂಗ್ ರದ್ದು ಆಗುತ್ತೆ. ಇಲ್ಲಿ ಮೋಟಾರ್ ಬೋಟ್ ಇಲ್ಲದ ಕಾರಣ ಮಾನವ ಚಲಿತ ದೋಣಿಗಳನ್ನು ಬಳಕೆ ಮಾಡಲಾಗುತ್ತದೆ. 10 ಸಾವಿರ ಕ್ಯೂಸೆಕ್ಗೂ ಅಧಿಕ ಪ್ರಮಾಣದಲ್ಲಿ ನೀರು ಬಿಟ್ಟ ವೇಳೆ ಇಲ್ಲಿ ಸೆಳೆತ ಹೆಚ್ಚಿರುವ ಕಾರಣ ದೋಣಿಯನ್ನು ಚಲಿಸಲು ಕಷ್ಟವಾಗುತ್ತದೆ. ಹೀಗಾಗಿ ದೋಣಿ ವಿಹಾರವನ್ನು ಬಂದ್ ಮಾಡಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಕೆ ಶಿವಕುಮಾರ್ ಆರ್ ಎಸ್ಎಸ್ ಹಾಡಿಗೆ ಕೆಎನ್ ರಾಜಣ್ಣ ಗರಂ: ಅವರು ಏನು ಮಾಡಿದ್ರೂ ನಡೀತದೆ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಅಧಿಕ ರಕ್ತದೊತ್ತಡ ನಿಯಂತ್ರಿಸಲು ಇದೊಂದು ಕೆಲಸ ಮಾಡಬೇಕು

ಮತಪರಿಷ್ಕರಣೆ ಯಾಕೆ ಮುಖ್ಯ ಎನ್ನುವುದಕ್ಕೆ ಬಿಹಾರದ ಈ ಘಟನೆಯೇ ಸಾಕ್ಷಿ

ಮುಂದಿನ ಸುದ್ದಿ
Show comments