ಪ್ರೀಯಾಂಕ ಖರ್ಗೆ ವಿರುದ್ಧ ಸೂಲಿಬೆಲೆ ವಾಗ್ದಾಳಿ

geetha
ಶನಿವಾರ, 2 ಮಾರ್ಚ್ 2024 (15:20 IST)
ಕಲಬುರಗಿ :  ಕಲಬುರಗಿಯ ಹಳ್ಳಿಖೇಡ್‌ ಗ್ರಾಮದಲ್ಲಿ ಸೂಲಿಬೆಲೆ ಅವರ ಕಾರ್ಯಕ್ರಮ ನಡೆಸಲು ಹೈಕೋರ್ಟ್‌ ಅನುಮತಿ ನೀಡಿದ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಸೂಲಿಬೆಲೆ, ರಾಜ್ಯದ 35 ತಾಲೂಕುಗಳಲ್ಲಿ ಆಗದ ಶಾಂತಿಭಂಗ ಚಿತ್ತಾಪುರದಲ್ಲಿ ಮಾತ್ರ ಆಗುತ್ತದೆಯೇ ಎಂದು ಪ್ರಶ್ನಿಸಿದರು.  ಸಚಿವರಾಗಿದ್ದೂ ಸಹ ಸ್ವಂತ ತನ್ನ ಕ್ಷೇತ್ರದಲ್ಲಿ ಸತ್ಯವನ್ನು ಎದುರಿಸಲಾಗದೇ ಪ್ರಿಯಾಂಕ್‌ ಖರ್ಗೆಹೇಡಿತನದಿಂದ ಮುಖ ಮುಚ್ಚಿಕೊಳ್ಳಲು ಯತ್ನಿಸುತ್ತಿದ್ದಾರೆಂದು ಯುವ ಬ್ರಿಗೇಡ್‌  ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಟೀಕಿಸಿದ್ದಾರೆ.
 
ಪ್ರಿಯಾಂಕ್‌ ಖರ್ಗೆ ಹೆದರಿರುವುದು ಎಲ್ಲರಿಗೂ ಗೊತ್ತು. ಆದರೆ ರಾತ್ರಿ 11 ಗಂಟೆಗೆ ಇದ್ದಕ್ಕಿದ್ದಂತೆಯೇ ನಿಷೇಧಾಜ್ಞೆ ಹೇರುತ್ತಾರೆ. ಕಲಬುರಗಿ ಪ್ರವೇಶಕ್ಕೆ ನಿರ್ಬಂಧಿಸುತ್ತಾರೆ ಎನ್ನುವುದು ಹಾಸ್ಯಾಸ್ಪದ.‌ ಅಷ್ಟು ಮಾತ್ರವಲ್ಲದೇ ನಾಗರಿಕರ ರಕ್ಷಣೆಗಾಗಿ ಇರುವ ಪೊಲೀಸರನ್ನು ತಮ್ಮ ವೈಯಕ್ತಿಕ ಹಿತ  ಸಾಧನೆಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ಸೂಲಿಬೆಲೆ ಆರೋಪಿಸಿದರು.
 
ಪ್ರಿಯಾಂಕ್‌ ಖರ್ಗೆಯದ್ದು ಯಾವಾಗಲೂ ಹಿಟ್‌ ಅಂಡ್‌ ರನ್‌ . ನಾನು ಕೇಳಿದ ಪ್ರಶ್ನೆಗಳಿಗೆ ಉತ್ತರಿಸದೇ ಓಡಿ ಹೋದವರು. ಮೋದಿಯವರ ಪ್ರಖರತೆಯಿಂದಾಗಿ ಅವರಿಗೆ ಸ್ವಂತ ಕ್ಷೇತ್ರದಲ್ಲೇ ಲೋಕಸಭಾ ಚುನಾವಣೆಯ ಸೋಲಿನ ಭೀತಿ ಎದುರಾಗಿದೆ. ಇಡೀ ಕಾಂಗ್ರೆಸ್‌ ಪಕ್ಷವೇ ಕಂಗಾಲಾಗಿದೆ ಎಂದು ಚಕ್ರವರ್ತಿ ಸೂಲಿಬೆಲೆ ವ್ಯಂಗ್ಯವಾಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲೆ ತರಗತಿಯಲ್ಲೇ ಶಿಕ್ಷಕ-ಶಿಕ್ಷಕಿ ಸರಸ: ಶಾಲಾ ಕೊಠಡಿಯ ಲೀಲೆ ವಿಡಿಯೋ ವೈರಲ್

ಎಂಥಾ ಸಾವು... ಆರತಿ ಮಾಡುತ್ತಿರುವಾಗಲೇ ಕುಸಿದು ಬಿದ್ದು ಕೊನೆಯುಸಿರೆಳೆದ ಸರಳ ಸಜ್ಜನ ಪೂಜಾರಿ Video

ಸಚಿವ ಸ್ಥಾನಕ್ಕಾಗಿ ಕಾಯುತ್ತಿದ್ದವರಿಗೆ ಕಾಂಗ್ರೆಸ್ ಹೈಕಮಾಂಡ್ ಗುಡ್ ನ್ಯೂಸ್

ಕಲಬುರಗಿ: ಜೈಲಿನಿಂದ ಪರಾರಿಯಾಗಿದ್ದ ಸಜಾ ಕೈದಿಗೆ ಪೋಲಿಸರ ಗುಂಡೇಟು, ಮತ್ತೊಮ್ಮೆ ಸೆರೆ

Karnataka Weather: ಇಂದು ಈ ಜಿಲ್ಲೆಗಳಿಗೆ ಸಾಧಾರಣ ಮಳೆ ನಿರೀಕ್ಷೆ

ಮುಂದಿನ ಸುದ್ದಿ
Show comments