Webdunia - Bharat's app for daily news and videos

Install App

ಮಗಳೊಂದಿಗೆ ಸಂಪರ್ಕವೇ ಇಲ್ಲ ಎಂದಿದ್ದ ಡಿಜಿಪಿ ರಾಮಚಂದ್ರರಾವ್: ರನ್ಯಾ ರಾವ್ ಮೊದಲು ಕರೆ ಮಾಡಲು ಹೇಳಿದ್ದೇ ತಂದೆಗೆ

Krishnaveni K
ಶನಿವಾರ, 15 ಮಾರ್ಚ್ 2025 (12:57 IST)
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ನಟಿ ರನ್ಯಾ ರಾವ್ ಬಂಧಿತರಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ವಿಚಾರ ಬಯಲಾಗುತ್ತಿದೆ. ರನ್ಯಾ ಬಂಧನವಾದಾಗ ನನಗೆ ಮಗಳ ಜೊತೆ ಸಂಪರ್ಕವೇ ಇರಲಿಲ್ಲ ಎಂದು ರನ್ಯಾ ತಂದೆ ಡಿಜಿಪಿ ರಾಮಚಂದ್ರ ರಾವ್ ಹೇಳಿದ್ದರು. ಆದರೆ ಬಂಧನದ ಬಳಿಕ ರನ್ಯಾ ಮೊದಲು ಕರೆ ಮಾಡಲು ಹೇಳಿದ್ದೇ ತಂದೆಗೆ ಎನ್ನಲಾಗಿದೆ.

ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ರನ್ಯಾ ತಂದೆ ಡಿಜಿಪಿ ರಾಮಚಂದ್ರ ರಾವ್ ಅವರನ್ನು ಈಗ ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿದೆ. ರನ್ಯಾ ಬಂಧನವಾಗುತ್ತಿದ್ದಂತೇ ಎಲ್ಲರೂ ಇದಕ್ಕೆಲ್ಲಾ ತಂದೆಯ ಸಹಾಯವಿದ್ದಿರಬಹುದು ಎಂದು ಆರೋಪಿಸಿದ್ದರು.

ಇದರ ಬೆನ್ನಲ್ಲೇ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದ ಡಿಜಿಪಿ ರಾಮಚಂದ್ರರಾವ್, ಮದುವೆ ಬಳಿಕ ಮಗಳು ನಮ್ಮ ಜೊತೆ ಸಂಪರ್ಕದಲ್ಲಿಲ್ಲ. ಅವಳ ಕೆಲಸ ನನಗೆ ಗೊತ್ತೇ ಇಲ್ಲ ಎಂದು ಭಾವನಾತ್ಮಕವಾಗಿ ಪತ್ರ ಬರೆದಿದ್ದರು.

ಆದರೆ ಈಗ ಕೆಲವು ಮೂಲಗಳ ಪ್ರಕಾರ ರನ್ಯಾ ಬಂಧನದ ಬಳಿಕ ತಮ್ಮ ಪರಿಚಯದ ಬಸವರಾಜ್ ಎಂಬವರಿಗೆ ಕರೆ ಮಾಡಿ ತಂದೆಗೆ ಮತ್ತು ಅಂಕಲ್ ಗೆ ಕರೆ ಮಾಡಿ ವಿಷಯ ಹೇಳಲು ತಿಳಿಸಿದ್ದರು ಎಂದು ವಿಚಾರ ಬಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಮುಂದಿನ ಸುದ್ದಿ
Show comments