Webdunia - Bharat's app for daily news and videos

Install App

ರನ್ಯಾ ರಾವ್ ಚಿನ್ನ ಕಳ್ಳಸಾಗಣಿಕೆಗೆ ಇಬ್ಬರು ಸಚಿವರ ಸಹಾಯ: ಬಂಧನದ ವೇಳೆಯೇ ಹೋಗಿತ್ತು ಕರೆ

Krishnaveni K
ಸೋಮವಾರ, 10 ಮಾರ್ಚ್ 2025 (12:25 IST)
ಬೆಂಗಳೂರು: ದುಬೈನಿಂದ ಚಿನ್ನ ಕಳ್ಳಸಾಗಣಿಕೆ ಪ್ರಕರಣದಲ್ಲಿ ಬಂಧಿತಳಾಗಿರುವ ನಟಿ ರನ್ಯಾ ರಾವ್ ಗೆ ರಾಜ್ಯದ ಇಬ್ಬರು ಸಚಿವರ ಸಹಾಯವಿದೆ ಎಂದು ವರದಿಯಾಗಿದೆ. ಇದೀಗ ಈ ಬಗ್ಗೆ ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದೆ.

ಚಿತ್ರನಟಿ ರನ್ಯಾ ರಾವ್ ದುಬೈನಿಂದ ಚಿನ್ನಸಾಗಣಿಕೆ ಆರೋಪದಲ್ಲಿ ಬೆಂಗಳೂರು ವಿಮಾನ ನಿಲ್ದಾಣದಲ್ಲೇ ಬಂಧಿತರಾಗಿದ್ದರು. ಇದಾದ ಬಳಿಕ ನಟಿಯನ್ನು ತೀವ್ರ ವಿಚಾರಣೆಗೊಳಪಡಿಸಲಾಗುತ್ತಿದೆ. ಈ ವೇಳೆ ಅನೇಕ ವಿಚಾರಗಳು ಬಯಲಿಗೆ ಬರುತ್ತಿವೆ.

ಇದೀಗ ರನ್ಯಾಗೆ ಸರ್ಕಾರದ ಇಬ್ಬರು ಸಚಿವರ ಸಹಾಯವಿತ್ತೇ ಎಂಬ ಅನುಮಾನವಿದೆ. ಬಂಧನಕ್ಕೊಳಗಾದ ಮೇಲೆ ತನ್ನ ಸಹಾಯಕ್ಕಾಗಿ ಈ ಸಚಿವರಿಗೆ ಬಂಧನದ ವೇಳೆಯೇ ನಟಿ ಕರೆ ಮಾಡಿದ್ದಳು ಎಂಬ ಅನುಮಾನ ಮೂಡಿದೆ. ಬಂಧನದವೇಳೆ ನಟಿ ಮೊಬೈಲ್ ನಿಂದ ಸಚಿವರೊಬ್ಬರಿಗೆ ಕರೆ ಮಾಡಲು ಯತ್ನಿಸಿದಾಗ ತಕ್ಷಣವೇ ಅಧಿಕಾರಿಗಳು ಆಕೆಯ ಕೈಯಿಂದ ಮೊಬೈಲ್ ಕಿತ್ತುಕೊಂಡಿದ್ದಾರೆ ಎನ್ನಲಾಗಿದೆ.

ಇದೀಗ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಈ ಪ್ರಕರಣದಲ್ಲಿ ಸಚಿವರ ಕೈವಾಡವಿರುವುದು ಸಾಕಷ್ಟು ಅನುಮಾನ ಮೂಡಿಸಿದೆ. ಈ ಪ್ರಕರಣ ರಾಜ್ಯ ಸರ್ಕಾರಕ್ಕೂ ಕಳಂಕ ತಂದಿದೆ. ಸಚಿವರು ಭಾಗಿಯಾಗಿದ್ದರೆ ಮುಖ್ಯಮಂತ್ರಿಗಳು ಪ್ರಾಮಾಣಿಕ ಕ್ರಮ ಕೈಗೊಳ್ಳಬೇಕು. ಇಲ್ಲದೇ ಹೋದರೆ ಅದರ ಹೊಣೆ ಮುಖ್ಯಮಂತ್ರಿಗಳೇ ಹೊರಬೇಕಾಗುತ್ತದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments