Publish Date: Fri, 03 Apr 2026 (19:25 IST)
Updated Date: Fri, 03 Apr 2026 (19:32 IST)
ದಾವಣಗರೆ: ಹುಬ್ಬಳ್ಳಿಯಲ್ಲಿ ಜಿಮ್ ಟ್ರೈನರ್ ವಿರುದ್ಧ ಕೇಳಿವಂದಿರುವ ಆರೋಫ ಸಂಬಂಧ ಸಮೀರ್ ವಿರುದ್ಧ ಸೂಕ್ತ ಕ್ರಮಕ್ಕೆ ಗೃಹಸಚಿವ ಜಿ ಪರಮೇಶ್ವರ್ ಸೂಚಿಸಿದ್ದಾರೆ.
ಈ ವಿಚಾರವಾಗಿ ದಾವಣಗೆರೆಯಲ್ಲಿ ಪ್ರತಿಕ್ರಿಯಿಸಿದ ಅವರು, ಪ್ರಕರಣ ಸಂಬಂಧ ಎಲ್ಲ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ.
ಯಾರೇ ಆಗಿದ್ದರೂ ಕೂಡ ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ಯುವತಿಯನ್ನು ರಕ್ಷಣೆ ಮಾಡಲಾಗಿದೆ. ಜಿಮ್ ಟ್ರೈನರ್ ಮೇಲೆ ಕ್ರಮ ತೆಗೆದುಕೊಳ್ಳಲು ಹೇಳಿದ್ದೇನೆ ಎಂದರು.
ಹುಬ್ಬಳ್ಳಿ ನಗರದಲ್ಲಿ ಲವ್ ಜಿಹಾದ್ ಆರೋಪ ಹಿನ್ನೆಲೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಲವ್ ಜಿಹಾದ್ ಆರೋಪದ ಮೇಲೆ ಜಿಮ್ ಟ್ರೈನರ್ ಸಮೀರ್ ಮನೆಗೆ ನುಗ್ಗಿದ ಹಿಂದೂ ಪರ ಸಂಘಟನೆಗಳು ಯುವಕನನ್ನು ಹಳೆ ಹುಬ್ಬಳ್ಳಿ ಠಾಣೆ ಪೊಲೀಸರಿ ಒಪ್ಪಿಸಿದ್ದಾರೆ.