Webdunia - Bharat's app for daily news and videos

Install App

8 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಹತ್ಯೆ

Webdunia
ಸೋಮವಾರ, 25 ಮೇ 2015 (13:00 IST)
ಎಂಟು ವರ್ಷದ ಬಾಲಕಿಯೋರ್ವಳ ಮೇಲೆ ಅತ್ಯಾಚಾರವೆಸಗಿರುವ ದುಷ್ಕರ್ಮಿಗಳು, ಬಳಿಕ ಕಲ್ಲಿನಿಂದ ಜಜ್ಜಿ ಹತ್ಯೆಗೈದು ಪರಾರಿಯಾಗಿರುವ ಘಟನೆ ತಾಲೂಕಿನ ಕೆರಗೋಡು ಬಳಿಯ ಶಿವಾರ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ.
 
ಮೃತದ ಬಾಲಕಿಯು ತಾಲೂಕಿನ ಕುರಿದೊಡ್ಡಿ ಗ್ರಾಮದ ನಿವಾಸಿಯಾಗಿದ್ದು, ಕೇವಲ 8 ವರ್ಷದ ಪ್ರಾಯದವಳಾಗಿದ್ದಾಳೆ. ಅಲ್ಲದೆ ಶಿವಾರ ಗ್ರಾಮವು ತನ್ನ ಅಜ್ಜಿಯ ಮನೆಯಾಗಿದ್ದು, ಬಾಲಕಿ ಇಲ್ಲಿಯೇ ಶಾಲಾಭ್ಯಾಸ ಮಾಡುತ್ತಿದ್ದಳು ಎನ್ನಲಾಗಿದೆ. 
 
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಜಿ. ಬೊರಸೆ, ಡಿವೈಎಸ್‌ಪಿ ಉದೇಶ್, ವೃತ್ತ ನಿರೀಕ್ಷಕ ಲೋಕೇಶ್, ಪಿಎಸ್ಐ ಮುನಿಯಪ್ಪ ಸೇರಿದಂತೆ ಜಿಲ್ಲಾ ಪೊಲೀಸ್ ಇಲಾಖೆಯ ಇತರೆ ಉನ್ನತಾಧಿಕಾರಿಗಳು ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡದೊಂದಿಗೆ ಆಗಮಿಸಿ ಪರಿಶೀಲನೆ ನಡೆಸಿದರು. 
 
ಇದೇ ವೇಳೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬೊರಸೆ, ತಿಂಡಿ ತಿನಿಸಿನ ಆಸೆ ತೋರಿಸಿ ಕರೆದೊಯ್ದಿರುವ ದುಷ್ಕರ್ಮಿಗಳು ಬಳಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಈ ಹೀನ ಕೃತ್ಯವು ಗ್ರಾಮದ ಶಂಕರೇಗೌಡ ಅವರಿಗೆ ಸೇರಿದ ಪಂಪ್‍ಸೆಟ್ ಮನೆಯಲ್ಲಿ ನಡೆದಿದ್ದು, ಇಲ್ಲಿನ ಕೆರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments