Webdunia - Bharat's app for daily news and videos

Install App

ಪ್ರೀತಿಸಿದ ಹುಡುಗಿಯ ಮೇಲೆ ಪ್ರಿಯಕರ, ಸ್ನೇಹಿತನಿಂದ ರೇಪ್!

Webdunia
ಶುಕ್ರವಾರ, 9 ಜೂನ್ 2023 (14:10 IST)
ಬೆಂಗಳೂರು : ಗೆಳೆಯನ ಜೊತೆ ಸೇರಿಕೊಂಡು ಪ್ರಿಯಕರನೇ ತನ್ನ ಪ್ರಿಯತಮೆಯನ್ನು ಅತ್ಯಾಚಾರ ಮಾಡಿದ ಘಟನೆಯೊಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.
 
ಪುರುಷೋತ್ತಮ್ ಹಾಗೂ ಚೇತನ್ ಆರೋಪಿಗಳು. ಮೂಲತಃ ತುಮಕೂರಿನ ನಿವಾಸಿಯಾಗಿರುವ ಯುವತಿ, ಪ್ಯಾರಾ ಮೆಡಿಕಲ್ ಓದುತ್ತಿದ್ದಳು. ಈಕೆ ಹಾಗೂ ತುಮಕೂರಿನ ಕೊರಟಗೆರೆ ನಿವಾಸಿ ಪುರುಷೋತ್ತಮ್ ಕಳೆದ 1 ವರ್ಷದಿಂದ ಪರಸ್ಪರ ಪೀತಿಸುತ್ತಿದ್ದರು. 

ಕಳೆದ ಒಂದು ವಾರದ ಹಿಂದೆ ಯುವತಿಯನ್ನ ಭೇಟಿ ಮಾಡಿದ್ದ ಆರೋಪಿ ಪುರುಷೋತ್ತಮ್, ನಂತರ ಯುವತಿಯ ಮೊಬೈಲ್ ಪಡೆದು ಬೆಂಗಳೂರಿಗೆ ಬಂದಿದ್ದ. ಎರಡು ದಿನಗಳ ಹಿಂದೆ ಪ್ರಿಯಕರನಿಗೆ ಕರೆ ಮಾಡಿ ನನ್ನ ಮೊಬೈಲ್ ವಾಪಸ್ ಕೊಡು ಅಂತ ಯುವತಿ ಕೇಳಿದ್ದಳು. ಈ ವೇಳೆ ಬೆಂಗಳೂರಿನ ಮೆಜೆಸ್ಟಿಕ್ ಗೆ ಬಾ, ನಿನ್ನ ಮೊಬೈಲ್ ಕೊಡ್ತೀನಿ ಅಂತ ಪುರುಷೋತ್ತಮ್ ಹೇಳಿದ್ದಾನೆ. ಹೀಗಾಗಿ ಮೇ 6 ರಂದು ಯುವತಿ ಬೆಂಗಳೂರಿನ ಮೆಜೆಸ್ಟಿಕ್ ಗೆ ಬಂದಿದ್ದಳು.

ಯುವತಿಯನ್ನ ಪುರುಷೋತ್ತಮ್ ಗಿರಿನಗರದ ತನ್ನ ಸ್ನೇಹಿತ ಚೇತನ್ ಮನೆಗೆ ಕರೆದುಕೊಂಡು ಬಂದಿದ್ದ. ನನ್ನ ಮೊಬೈಲ್ ಕೊಡು ಊರಿಗೆ ಹೋಗಬೇಕು ಅಂತ ಹೇಳಿದಾಗ, ಇವತ್ತು ಇಲ್ಲೆ ಇರು ಅಂತ ಹೇಳಿ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿದ್ದಾನೆ. ನಂತರ ತನ್ನ ಸ್ನೇಹಿತ ಚೇತನ್ನ ಘಟನಾ ಸ್ಥಳಕ್ಕೆ ಕರೆಸಿಕೊಂಡಿದ್ದಾನೆ. ಬಳಿಕ ಪುರುಷೋತ್ತಮ್ ಹಾಗೂ ಆತನ ಗೆಳೆಯ ಚೇತನ್ ಇಬ್ಬರೂ ಸೇರಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ