Webdunia - Bharat's app for daily news and videos

Install App

ಪತಿಯ ಮೇಲೆ ಅತ್ಯಾಚಾರ ಆರೋಪ ತಡೆ ನೀಡಿದೆ ಸುಪ್ರೀಂಕೋರ್ಟ್

Webdunia
ಬುಧವಾರ, 20 ಜುಲೈ 2022 (17:42 IST)
ವಿವಾಹವೆನ್ನುವುದು ಪತಿಗೆ ಪತ್ನಿಯ ಮೇಲೆ ಬಲವಂತದ ಅತ್ಯಾಚಾರ ಎಸಗಲು ಲೈಸೆನ್ಸ್ ಅಲ್ಲ, ಹೆಂಡತಿ ಮೇಲೆ ರೇಪ್ ಮಾಡುವ ಗಂಡನಿಗೆ ಯಾವುದೇ ವಿನಾಯ್ತಿ ಇರಬಾರದೆಂದು ಕರ್ನಾಟಕ ಹೈಕೋರ್ಟ್ ಮಾ.23ರಂದು ನೀಡಿದ್ದ ಮಹತ್ವದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ.
ಪತ್ನಿ ತನ್ನ ವಿರುದ್ಧ ದಾಖಲಿಸಿರುವ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಬೆಂಗಳೂರಿನ ಹೃಷಿಕೇಶ್ ಎಂಬುವರು ಸಲ್ಲಿಸಿರುವ ಅರ್ಜಿಯನ್ನು ಆಲಿಸಿದ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ, ಅತ್ಯಾಚಾರ ಆರೋಪದಲ್ಲಿ ಪತಿಯೇ ಇದ್ದರೂ ಅವರಿಗೆ ವಿನಾಯ್ತಿ ನೀಡಬಾರದು, ಆ ಬಗ್ಗೆ ಶಾಸಕಾಂಗ ಚಿಂತನೆ ನಡೆಸಬೇಕಾಗುತ್ತದೆ ಎಂದು ಆದೇಶಿಸಿತ್ತು.
 
ಗಂಡನ ವಿರುದ್ಧವೇ ಹೆಂಡತಿ ಅತ್ಯಾಚಾರ ಕೇಸ್ ದಾಖಲಿಸಿದ್ದಾರೆ. ಹಾಗಾಗಿ ಪತಿಗೆ ವಿನಾಯಿತಿ ಇದ್ದರೂ ಆತನ ವಿರುದ್ಧದ ಅತ್ಯಾಚಾರ ಆರೋಪ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
 
ಪತಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಏಕಸದಸ್ಯ ಪೀಠವು ಪತಿಯ ವಿರುದ್ಧವೂ ಅತ್ಯಾಚಾರ ಕೇಸ್ ಪರಿಗಣಿಸಬೇಕು. ಪತಿಯ ಕೃತ್ಯದಿಂದ ಪತ್ನಿಯ ಮೇಲೆ ಮಾನಸಿಕವಾಗಿ, ದೈಹಿಕವಾಗಿ ಪರಿಣಾಮ ಬೀರುತ್ತದೆ. ಪತ್ನಿಯ ಮನಸಿನ ಮೇಲೆ ಅಳಿಸಲಾಗದ ಕಲೆ ಉಳಿದುಬಿಡುತ್ತದೆ. ಅತ್ಯಾಚಾರದ ವಿಚಾರದಲ್ಲಿ ಮಹಿಳೆ, ಪತ್ನಿಯ ನಡುವೆ ತಾರತಮ್ಯ ಸರಿಯಲ್ಲ.ವಿವಾಹ ಪತ್ನಿಯ ಮೇಲೆ ದೌರ್ಜನ್ಯವೆಸಗಲು ನೀಡುವ ಅನುಮತಿಯಲ್ಲ ಎಂದು ಹೇಳಿದೆ.
 
"ಸಂವಿಧಾನದ ಅಡಿಯಲ್ಲಿ ಎಲ್ಲ ಮಾನವ ಜೀವಿಗಳೂ ಸಮಾನರೇ, ಅವರು ಗಂಡಾಗಿದ್ದರೂ ಸರಿ, ಹೆಣ್ಣಾಗಿದ್ದರೂ ಸರಿಯೇ ಅಥವಾ ಇನ್ಯಾರೇ ಆಗಿದ್ದರೂ ಸೈ, ಸಂವಿಧಾನದ 14ನೇ ವಿಧಿಯ ಅನುಸಾರ ಸಮಾನತೆ ಸಮಾನತೆಯೇ. ಇದರಲ್ಲಿ ಯಾವುದೇ ರಾಜೀ ಇಲ್ಲ'' ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments