18 ವರ್ಷದ ಯುವತಿ ಮೇಲೆ 4 ತಿಂಗಳ ಕಾಲ ನಿರಂತರ ಅತ್ಯಾಚಾರ ಮಾಡಿದ ಆರೋಪದ ಮಂಜುನಾಥ್ ಎಂಬವನ ವಿರುದ್ದ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಮಂಜುನಾಥ್ ವಿರುದ್ಧ ಅತ್ಯಾಚಾರ, ಕೊಲೆ ಬೆದರಿಕೆ ಪ್ರಕರಣವನ್ನು ದಾಖಲಿಸಲಾಗಿದೆ.
ಇಬ್ಬರೂ ಚಿಕ್ಕಮಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಗಳು. ಮಂಜುನಾಥ್ ಯುವತಿಯ ಜೊತೆ ಸ್ನೇಹ ಬೆಳೆಸಿ, ಗೌಡರಹಳ್ಳಿ ಸೇತುವೆಯ ಕೆಳಗೆ ಜೊತೆಯಲ್ಲಿದ್ದಾಗ ಯುವತಿಯ ಮೇಲೆ ಅತ್ಯಾಚಾರ ಮಾಡಿದ್ದ. ಹೀಗೆ ಅದೇ ಸೇತುವೆಯ ಕೆಳಗೆ ನಾಲ್ಕು ಬಾರಿ ಅತ್ಯಾಚಾರ ಮಾಡಿದ್ದನಲ್ಲದೇ ವಿಷಯವನ್ನು ಬಾಯಿಬಿಟ್ಟರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ.
ಚಿಕ್ಕಮಗಳೂರು ಗ್ರಾಮಾಂತರ ಠಾಣೆಗೆ ಯುವತಿ ದೂರು ನೀಡಿ ತನ್ನ ಮೇಲೆ ನಿರಂತರ ಅತ್ಯಾಚಾರ ನಡೆದ ಬಗ್ಗೆ ಪೊಲೀಸರಿಗೆ ತಿಳಿಸಿದ್ದಾಳೆ. ಯುವತಿ ಚಿಕ್ಕಮಗಳೂರು ಜಿಲ್ಲೆಯ ಸಾದರಹಳ್ಳಿ ನಿವಾಸಿಯಾಗಿದ್ದು, ಮಂಜುನಾಥ್ ಚಿಕ್ಕಮಗಳೂರಿನ ದಂಟರಮಕ್ಕಿ ನಿವಾಸಿಯಾಗಿದ್ದಾನೆ.