9 ವರ್ಷದ ಬಾಲಕಿಯ ಮೇಲೆ ಮಂಜುನಾಥ್ ಎಂಬವ ಅತ್ಯಾಚಾರ ಮಾಡಿದ ಘಟನೆ ಬೆಂಗಳೂರಿನ ರಾಜಗೋಪಾಲನಗರದಲ್ಲಿ ನಡೆದಿದೆ. ನೆರಮನೆಯವನಾದ ಮಂಜುನಾಥ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾನೆ.
ಮಗುವಿನ ತಂದೆ ಮತ್ತು ತಾಯಿ ಇಬ್ಬರೂ ಕೆಲಸಕ್ಕೆ ಹೋಗಿದ್ದು, ಬಾಲಕಿ ಒಂಟಿಯಾಗಿದ್ದಾಗ ಮನೆಗೆ ನುಗ್ಗಿ ಅತ್ಯಾಚಾರವೆಸಗಿದ್ದಾನೆ. ಮಂಜುನಾಥ್ ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದು, ಕೆಲಸದಿಂದ ಹಿಂತಿರುಗಿದ ಬಳಿಕ ಅವನನ್ನು ಕಂಬಕ್ಕೆ ಕಟ್ಟಿ ಹಾಕಿ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದರು. ಮಂಜುನಾಥ್ನನ್ನು ಪೊಲೀಸರು ಬಂಧಿಸಿ ತನಿಖೆ ನಡೆಸಿದ್ದಾರೆ.
ಬಾಲಕಿಯ ಮೇಲೆ ಅತ್ಯಾಚಾರ
ಮನೆಯವರ ಜೊತೆ ಮುನಿಸಿಕೊಂಡು ಮೈಸೂರಿಗೆ ಬಂದ ಬಾಲಕಿಯ ಮೇಲೆ ರೈಲಿನಲ್ಲಿ ಕಾಮುಕನೊಬ್ಬ ಅತ್ಯಾಚಾರ ಮಾಡಿದ ಘಟನೆ ಸಂಭವಿಸಿದೆ. ರೈಲಿನಲ್ಲಿ ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಬಾಲಕಿಯ ಜೊತೆ ಸ್ನೇಹ ಸಂಪಾದಿಸಿದ ಯುವಕನೊಬ್ಬ ಬಾಲಕಿಯ ಮೇಲೆ ಚಲಿಸುತ್ತಿದ್ದ ರೈಲಿನಲ್ಲೇ ಅತ್ಯಾಚಾರವೆಸಗಿದ. ಮಂಡ್ಯದ ಪಾಂಡವಪುರದ ಬಳಿ ಅತ್ಯಾಚಾರವೆಸಗಿದ್ದಾನೆಂದು ಬಾಲಕಿ ದೂರಿನಲ್ಲಿ ತಿಳಿಸಿದ್ದಾಳೆ. ಬಾಲಕಿ ತೀರಾ ಅಸ್ವಸ್ಥಳಾಗಿ ಕಂಡುಬಂದು, ಚಿಕಿತ್ಸೆ ನೀಡಲಾಗುತ್ತಿದ್ದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.