ಸಹಕಾರಿ ಬ್ಯಾಂಕ್ ಒಂದಕ್ಕೆ ನುಗ್ಗಿ ಅಲ್ಲಿಯ ಉದ್ಯೋಗಿಯ ಮೇಲೆ ಅತ್ಯಾಚಾರ ನಡೆಸಿದ ದುಷ್ಕರ್ಮಿಯೊಬ್ಬ ಆ ಬಳಿಕ ಬ್ಯಾಂಕ್ನಿಂದ 3 ಲಕ್ಷ ರೂಪಾಯಿ ದರೋಡೆ ಮಾಡಿ ಪರಾರಿಯಾಗಿದ್ದಾನೆ. ಶುಕ್ರವಾರ ಈ ಘಟನೆ ನಡೆದಿದ್ದು, ಯುವತಿ ನಿನ್ನೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
ಕೋಲಾರ್ ಜಿಲ್ಲೆ ಮೇಮಗಲ್ನಲ್ಲಿ ಘಟನೆ ನಡೆದಿದ್ದು ಆರೋಪಿಯನ್ನು ಕೃಷ್ಣ ಎಂದು ಗುರುತಿಸಲಾಗಿದೆ. ಪೀಡಿತೆಗೆ ಆತ ಪರಿಚಯಸ್ಥ ಎಂದು ಹೇಳಲಾಗುತ್ತಿದೆ.
"ಏಕಾಏಕಿ ಬ್ಯಾಂಕ್ಗೆ ನುಗ್ಗಿದ ಆತ ಬ್ಯಾಂಕ್ನಲ್ಲಿ ಒಬ್ಬಳೇ ಇದ್ದ ನನ್ನನ್ನು ಒಳಕ್ಕೆ ಎಳೆದೊಯ್ದು ಅತ್ಯಾಚಾರ ನಡೆಸಿದ್ದಾನೆ. ನಂತರ ಬ್ಯಾಂಕ್ನಲ್ಲಿದ್ದ 3 ಲಕ್ಷ ರೂಪಾಯಿಗಳನ್ನು ಎತ್ತಿಕೊಂಡು ಹೋಗಿದ್ದಾನೆ", ಎಂದು ನೊಂದ ಯುವತಿ ಮಾಧ್ಯಮದ ಬಳಿ ಹೇಳಿದ್ದಾಳೆ.
ತನ್ನ ಮೇಲಿನ ಅತ್ಯಾಚಾರ ಮತ್ತು ದರೋಡೆಗೆ ಸಂಬಂಧಿಸಿದಂತೆ 25 ವರ್ಷದ ಯುವತಿ ಮೇಮಗಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ನಾಪತ್ತೆಯಾಗಿರುವ ಆರೋಪಿ ಕೃಷ್ಣನಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ.