ಅಪರೂಪದ ಕೈ ಚಕ್ಕುಲಿ ಕಂಬಳ

Webdunia
ಬುಧವಾರ, 5 ಸೆಪ್ಟಂಬರ್ 2018 (17:28 IST)
ಗಣೇಶ ಚತುರ್ಥಿ ಅಗಮಿಸುತ್ತಿದ್ದಂತೆ ಎಲ್ಲರ ಮನೆಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ವಿಶೇಷವಾಗಿ ಗಣೇಶ ಚೌತಿಗೆ ಮಾಡುವ ಗಣೇಶನಿಗೆ ಪ್ರಿಯವಾದ ಚಕ್ಕುಲಿ ಕಂಬಳ ಮಾಡುವ ಕೆಲಸ ಎಲ್ಲೆಡೆ ಸಂಭ್ರಮದಿಂದ ಕೆಲಸ ಸಾಗಿದೆ.

ಶಿರಸಿಯ ಹೆಗಡೆಕಟ್ಟಾ ಸಮೀಪದ ಕಲ್ಮನೆ ಊರಿನಲ್ಲಿ ಎಲ್ಲರೂ ಚಕ್ಕುಲಿ ಕಂಬಳ ಮಾಡುವ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಅದರಲ್ಲೂ ಉತ್ತರಕನ್ನಡ ಜಿಲ್ಲೆ ಶಿರಸಿಯ  ಕೆಲವೇ ಕಡೆ ಮೊದಲಿನಿಂದಲೂ ರೂಢಿಯಲ್ಲಿರುವ ಕೈ ಚಕ್ಕುಲಿ ಕಂಬಳ ಶುರುವಾಗಿದೆ. ಎಲ್ಲ ಕಂಬಳದಂತೆ ಇಲ್ಲೂ ಕಲ್ಮನೆ ಹೆಗ್ಗಾರು, ಹೆಗಡೆಕಟ್ಟಾ ಸುತ್ತಮುತ್ತಲಿನ ಉರಿನವರು, ಸಂಬಂದಿಗಳು ಒಬ್ಬರು ಮತ್ತೊಬ್ಬರ ಮನೆಗೆ ಕಂಬಳಕ್ಕೆ ಸಹಕರಿಸುತ್ತಾರೆ.  ಕಂಬಳ ದಲ್ಲಿ ಬರೀ ಚಕ್ಕುಲಿ ಅಷ್ಟೇ ಅಲ್ಲದೆ,  ಅಕ್ಷರಗ ಳನ್ನು ಸಹ ಬರೆಯುತ್ತಾರೆ. ಕಾಲ ಬದಲಾದಂತೆ ಮನುಷ್ಯನು ವೈಜ್ಞಾನಿಕ ಉಪಕರಣಗಳಿಗೆ ಅಂಟಿಕೊಂಡಿದ್ದರು.

ಈ ಊರಲ್ಲಿ ಮಾತ್ರ ಎಲ್ಲರೂ ಪ್ರತಿವರ್ಷ ಕೈ ಕಂಬಳವನ್ನೇ ಮಾಡುತ್ತಾರೆ. ಹಿಂದಿನಿಂದ ಬಂದ ಸಂಪ್ರದಾಯ ಒಂದುಕಡೆ ಆಗಿದ್ರೆ, ಇಂತಹ ವಿಶೇಷ ಕಲೆ ಎಲ್ಲರಿಗೂ ಬರೋಲ್ಲ, ಈ ಚಕ್ಕುಲಿ ರುಚಿ ಹಾಗೂ ಬಾಳಿಕೆ ಜಾಸ್ತಿ. ಉಪಕರಣಗಳಿಂದ ಮಾಡಿದ ಚಕ್ಕುಲಿ ಕೆಲವೇ ದಿನ ಉಳಿದರೆ, ಇದನ್ನು ನಾಲ್ಕಾರು ತಿಂಗಳುಗಳ ಕಾಲ ಇಡಬಹುದು. ಹಬ್ಬದಲ್ಲಿ ಬಂದ ಸಂಬಂಧಿಕರಿಗೆ ಮತ್ತು ದೂರದ ಉರಲ್ಲಿರುವವರಿಗೆ  ಪಾರ್ಸಲ್ ಕಳಿಸಿಕೊಡುತ್ತಾರೆ. ಆದ್ದರಿಂದ ಈ ಊರಲ್ಲಿ ಪ್ರತಿ ಮನೆಯಲ್ಲಿಯೂ ಒಂದೇ ಬಾರಿ ಎರಡು, ಮೂರು ಕ್ಯಾನ್ ಗಟ್ಟಲೇ ಚಕ್ಕುಲಿ ಮಾಡಿ ತುಂಬಿಡುತ್ತಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಟುಂಬದ ಮಹಿಳೆಗೆ 2ಸಾವಿರ, ಪುರುಷರಿಗೆ ಉಚಿತ ಬಸ್ ಸೇವೆ: ಎಐಎಡಿಎಂಕೆ ಪ್ರಣಾಳಿಕೆ

ಬಿಯರ್ ಕುಡಿಯುತ್ತಾ ಬೈಕ್ ಚಾಲನೆ ಮಾಡಿದ ಮೂವರು ವೈದ್ಯರಿಗೆ ಬಿಗ್‌ಶಾಕ್‌

ಪಶ್ಚಿಮ ಏಷ್ಯಾ ಸಂಘರ್ಷ: ಟ್ರಂಪ್ ಜತೆ ಮಹತ್ವದ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಮಾತುಕತೆ

ಕೊನೆಯಾಯಿತು 13ವರ್ಷಗಳ ನೋವು: ದಯಾಮರಣ ಪಡೆದ ಹರೀಶ್ ರಾಣಾ ಇನ್ನಿಲ್ಲ

ರಾಜ್ಯ ಹವಾಮಾನದಲ್ಲಿ ಭಾರೀ ಬದಲಾವಣೆ, ಬೆಂಗಳೂರಿನಲ್ಲಿ ಮಳೆಯಾಗುತ್ತಾ

ಮುಂದಿನ ಸುದ್ದಿ
Show comments