ರೇಷನ್ ಕಾರ್ಡ್ ದಾರರು ಡಿಸೆಂಬರ್ 31 ರೊಳಗೆ ಈ ಕೆಲಸ ಮಾಡಬೇಕು

Krishnaveni K
ಬುಧವಾರ, 25 ಡಿಸೆಂಬರ್ 2024 (09:21 IST)
ಬೆಂಗಳೂರು: ಪಡಿತರ ಚೀಟಿ ಹೊಂದಿರುವವರು ಡಿಸೆಂಬರ್ 31 ರೊಳಗಾಗಿ ಈ ಒಂದು ಕೆಲಸ ಮಾಡಲೇಬೇಕು. ಇಲ್ಲದೇ ಹೋದರೆ ನಿಮ್ಮ ಪಡಿತರ ಚೀಟಿಯೇ ರದ್ದಾಗುವ ಅಪಾಯವಿದೆ. ಅದೇನು ಇಲ್ಲಿದೆ ವಿವರ.
 

ಪಡಿತರ ಚೀಟಿಗೆ ಸಂಬಂಧಪಟ್ಟಂತೆ ಕೇಂದ್ರ, ರಾಜ್ಯ ಸರ್ಕಾರಗಳು ಈಗ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಪಡಿತರ ಚೀಟಿ ಹೊಂದಿರುವವರು ತಮ್ಮ ಕುಟುಂಬ ಸದಸ್ಯರ ಬೆರಳಚ್ಚು ನೀಡುವ ಮೂಲಕ ಇಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಇದಕ್ಕೆ ಡಿಸೆಂಬರ್ 31 ರ ಗಡುವು ನೀಡಲಾಗಿದೆ. ಇದನ್ನು ಮಾಡದೇ ಹೋದರೆ ನಿಮ್ಮ ಪಡಿತರ ರದ್ದಾಗುವ ಅಪಾಯವಿದೆ.

ಇನ್ನು ಸುಳ್ಳು ದಾಖಲೆಗಳನ್ನು ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡಿರುವವರೂ ತಕ್ಷಣವೇ ತಮ್ಮ ವ್ಯಾಪ್ತಿಯ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ ಕಾರ್ಡ್ ಹಿಂತಿರುಗಿಸಬೇಕಾಗುತ್ತದೆ. ಅಲ್ಲದೆ ಕಳೆದ ಆರು ತಿಂಗಳಿನಿಂದ ರೇಷನ್ ಪಡೆಯದೇ ಇರುವವರ ಬಿಪಿಎಲ್ ಕಾರ್ಡ್ ಗಳನ್ನು ರದ್ದುಗೊಳಿಸುವಂತೆಯೂ ಕೇಂದ್ರ ಆಹಾರ ಇಲಾಖೆ ಸೂಚನೆ ನೀಡಿದೆ.

ಪಡಿತರ ಚೀಟಿ ಹೊಂದಿರುವವರು ತಮ್ಮ ಗುರುತ ನೋಂದಣಿ ಅಥವಾ ಮರುನೋಂದಣಿ ಮಾಡಿಸದೇ ಇದ್ದಲ್ಲಿದೆ ಡಿಸೆಂಬರ್ 31 ರೊಳಗಾಗಿ ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ತೆರಳಿ ಬೆರಳಚ್ಚು ನೀಡಿ ಇಕೆವೈಸಿ ಕಾರ್ಯ ಮಾಡಿಸಿಕೊಳ್ಳಬೇಕು. ಇಕೆವೈಸಿ ಮಾಡಿಸಿಕೊಳ್ಳದ ಗ್ರಾಹಕರಿಗೆ ಪಡಿತರ ಬಂದ್ ಆಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ಕಾಂಗ್ರೆಸ್ ಪಕ್ಷದ ರೇಖೆಯನ್ನು ಉಲ್ಲಂಘಿಸಿಲ್ಲ: ಶಶಿ ತರೂರ್‌ ಸ್ಪಷ್ಟನೆ

ನಂದಿನಿ ಹಾಲು, ಮೊಸರು ಇದೀಗ ₹10ಕ್ಕೂ ಲಭ್ಯ, ಇಲ್ಲಿದೆ ಮಾಹಿತಿ

ರಾಜಸ್ಥಾನದಲ್ಲಿ ತೀವ್ರಗೊಂಡ ಶೀತಗಾಳಿ, ಮನೆಯಿಂದ ಹೊರಬರಲು ಜನತೆ ಹಿಂದೇಟು

ಛತ್ತೀಸ್‌ಗಢ ಖದೀಮರ ಕೈಚಳಕ್ಕೆ ನಗರವೇ ಶಾಕ್‌, ಆಗಿದ್ದೇನು ಎಲ್ಲಿ

ಬಿಜೆ‍ಪಿ ಅಧ್ಯಕ್ಷರಾದ ಬಳಿಕ ಪ.ಬಂಗಾಳಕ್ಕೆ ಮೊದಲ ಭೇಟಿ ನೀಡಲಿರುವ ನಿತಿನ್ ನಬಿನ್

ಮುಂದಿನ ಸುದ್ದಿ
Show comments