Webdunia - Bharat's app for daily news and videos

Install App

ಪಡಿತರ ಧಾನ್ಯ: ಮಾಫಿಯಾ ಅಡ್ಡೆ ಮೇಲೆ ಡಿಸಿ ದಾಳಿ

Webdunia
ಶನಿವಾರ, 6 ಅಕ್ಟೋಬರ್ 2018 (15:02 IST)
ದಶಕಗಳಿಂದ ಗಡಿನಾಡಿನ ಜಿಲ್ಲೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಪಡಿತರ ಧಾನ್ಯದ ಮಾಫೀಯಾ ಅಡ್ಡೆಗಳನ್ನು ಒಂದೊಂದಾಗಿ ಹೆಡೆಮುರಿ ಕಟ್ಟುತ್ತಿರುವ ಜಿಲ್ಲಾಧಿಕಾರಿ ನೇತೃತ್ವದ ತಂಡಕ್ಕೆ ದಾಳಿ ವೇಳೆ ಸಿಕ್ರೇಟ್ ಡೈರಿ ದೊರೆತಿರುವುದು ಕುತೂಹಲ ಮೂಡಿಸಿದೆ.

ಬೀದರ್ ಜಿಲ್ಲಾಧಿಕಾರಿ ಡಾ.ಎಚ್.ಆರ್ ಮಹದೇವ ನೇತೃತ್ವದ ಅಧಿಕಾರಿಗಳ ತಂಡ ಮತ್ತೊಂದು ದಾಳಿ ಮಾಡಿದ್ದು ದಾಳಿ ವೇಳೆಯಲ್ಲಿ ಸಿಕ್ರೇಟ್ ಡೈರಿಯೊಂದು ಪತ್ತೆಯಾಗಿದೆ ಎನ್ನಲಾಗಿದೆ.

ಕಳೆದ ಒಂದು ವಾರದಿಂದ ಬೀದರ್ ಜಿಲ್ಲೆಯ ಹುಮನಾಬಾದ್, ಚಿಟಗುಪ್ಪ ಭಾಗದಲ್ಲಿ ದಾಳಿ ಮಾಡಿರುವ ಜಿಲ್ಲಾಡಳಿತ ತಡ ರಾತ್ರಿ ಎಸ್.ಪಿ ಟಿ ಶ್ರೀಧರ ನೇತೃತ್ವದ ಪೊಲೀಸರ ತಂಡ, ನಗರದ ಗಾಂಧಿಗಂಜ ಮಾರುಕಟ್ಟೆ ವ್ಯಾಪ್ತಿಯ ಗೋದಾಮಿನ ಮೇಲೆ ದಾಳಿ ನಡೆಸಿ ಭಾರಿ ಪ್ರಮಾಣದ ಪಡಿತರ ಅಕ್ಕಿ, ಗೋಧಿ, ಕಾಳು, ಕೊಬ್ಬರಿ ಪತ್ತೆ ಹಚ್ಚಿದ್ದಾರೆ. ಗುಜರಾತ್ ರಾಜ್ಯಕ್ಕೆ ಲೋಡ್ ಮಾಡಿ ಕಳುಹಿಸುತ್ತಿದ್ದ ಲಾರಿಯೊಂದನ್ನು ರೇಡ್ ಹ್ಯಾಂಡ್ ಆಗಿ ಜಪ್ತಿ ಮಾಡಿಕೊಂಡ ಪೊಲೀಸರು ತೀವ್ರ ತನಿಖೆ ನಡೆಸಿದಾಗ ಅಕ್ಕಿ ಮಾಫೀಯಾದ ಜಾಲ ಪತ್ತೆಯಾಗಿದೆ.

ಇನ್ನೂ ದಾಳಿ ವೇಳೆಯಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ವ್ಯಾಪಾರಸ್ಥರಿಗೆ ನೀಡುವ ಸಿಕ್ರೇಟ್ ಡೈರಿಯೊಂದು ಪತ್ತೆಯಾಗಿದೆ ಎನ್ನಲಾಗಿದ್ದು, ದಶಕಗಳಿಂದ ಬಡವರ ಹೊಟ್ಟೆಗೆ ಸೇರಬೇಕಾದ ಪಡಿತರ ಧಾನ್ಯವನ್ನು ಅಕ್ರಮವಾಗಿ ಮಾರಾಟ ಮಾಡಿ ಮಾಫೀಯಾವಾಗಿ ಅಟ್ಟಹಾಸ ಮೆರೆಯುತ್ತಿದ್ದ ಜಾಲವೊಂದು ಪತ್ತೆಯಾಗಿದೆ ಎನ್ನಲಾಗಿದೆ.  ಈ ಮಾಫೀಯಾದ ಹೆಡೆಮುರಿ ಕಟ್ಟಲು ಜಿಲ್ಲಾಧಿಕಾರಿಗಳಿಗೆ ಡೈರಿ ಪೂರಕವಾಗಲಿದೆ ಎಂಬ ವ್ಯಾಪಕ ಚರ್ಚೆ ಕೂಡ ನಡೆಯುತ್ತಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments