Webdunia - Bharat's app for daily news and videos

Install App

ಪಡಿತರ ಬಳಕೆ ಮಾಡುತ್ತಿರುವವರಿಗೆ ಶಾಕಿಂಗ್ ಸುದ್ದಿ: ಇದನ್ನು ತಪ್ಪದೇ ಓದಿ

Krishnaveni K
ಸೋಮವಾರ, 16 ಡಿಸೆಂಬರ್ 2024 (10:56 IST)
ಬೆಂಗಳೂರು: ರಾಜ್ಯದಲ್ಲಿ ಪಡಿತರ ಚೀಟಿ ವ್ಯವಸ್ಥೆಯಲ್ಲಿ ಪಡಿತರ ಪಡೆಯುತ್ತಿರುವವರಿಗೆ ಶಾಕಿಂಗ್ ಸುದ್ದಿ ಕಾದಿದೆ. ಪಡಿತರ ಆಹಾರದ ಸುರಕ್ಷತೆ ಬಗ್ಗೆ ಈಗ ಅನುಮಾನ ಮೂಡಿದೆ.

ಬಿಪಿಎಲ್ ಸೇರಿದಂತೆ ರೇಷನ್ ಕಾರ್ಡ್ ದಾರರಿಗೆ ಸರ್ಕಾರ ಕೊಡುವ ಅಕ್ಕಿ, ಬೇಳೆ ಮುಂತಾದ ಆಹಾರ ಪದಾರ್ಥಗಳನ್ನು ವಿಷಕಾರೀ ಅಂಶದ ಜೊತೆಗೇ ದಾಸ್ತಾನು ಮಾಡಿ ಇಡಲಾಗುತ್ತಿದೆ ಎಂಬ ಶಾಕಿಂಗ್ ವಿಚಾರ ಬಹಿರಂಗವಾಗಿದೆ. ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾಲೆಕ್ಕ ಪರಿಶೋಧಕರು (ಸಿಎಜಿ) ವರದಿಯಲ್ಲಿ ಇದು ಬಹಿರಂಗವಾಗಿದೆ.

2017 ರಿಂದ 2022 ರವರೆಗೆ ಸಿಎಜಿ ಕೆಲವು ಜಿಲ್ಲೆಗಳಲ್ಲಿ ನಡೆದ ಸಮೀಕ್ಷೆಯಿಂದ ಇದು ಬೆಳಕಿಗೆ ಬಂದಿದೆ. ಆಹಾರ ಧಾನ್ಯಗಳನ್ನು ಕೀಟನಾಶಕಗಳು, ರಸಗೊಬ್ಬರದ ಜೊತೆ ದಾಸ್ತಾನು ಮಾಡುವ ವಿಚಾರ ಬಹಿರಂಗವಾಗಿದೆ. ಇದು ಆತಂಕಕಾರೀ ವಿಚಾರವಾಗಿದ್ದು ಲೋಪದೋಷಗಳನ್ನು ಸರಿಪಡಿಸಲು ಸಿಎಜಿ ಶಿಫಾರಸ್ಸು ಮಾಡಿದೆ.

ಆಹಾರ ಪದಾರ್ಥಗಳನ್ನು ಸುರಕ್ಷಿತವಾಗಿಡಬೇಕು. ಆಹಾರ ಗೋದಾಮಿನ ನಿರ್ವಹಣೆಗೆ ಮಾರ್ಗಸೂಚಿಗಳನ್ನು ಹಾಕಬೇಕು. ನ್ಯಾಯಬೆಲೆ ಅಂಗಡಿಗಳನ್ನೂ ಸರ್ಕಾರ ನಿಯಮಿತವಾಗಿ ತಪಾಸಣೆ ಮಾಡಬೇಕು ಮತ್ತು ತಪ್ಪಿತಸ್ಥ ನ್ಯಾಯಬೆಲೆ ಅಂಗಡಿಗಳ ಪರವಾನಗಿ ರದ್ದು ಮಾಡಬೇಕು ಎಂದು ಸಿಎಜಿ ಶಿಫಾರಸ್ಸು ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹದಾಯಿ ಯೋಜನೆಗೆ ಅನುಮತಿ ನಿರಾಕರಿಸಿ ಕೇಂದ್ರದಿಂದ ಕನ್ನಡಿಗರಿಗೆ ಅನ್ಯಾಯ: ಸಿದ್ದರಾಮಯ್ಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಪರಿಶುದ್ಧ ಚಿನ್ನದ ದರ ಇಂದು ಹೊಸ ದಾಖಲೆ

ಆಂಧ್ರದಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆ: ಆರ್ ಅಶೋಕ್, ವಿಜಯೇಂದ್ರ ಆಕ್ರೋಶ

ದೆಹಲಿಗೆ ತೆರಳಲಿರುವ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಗೆ ಇಂದಾದ್ರೂ ಸಿಗ್ತಾರಾ ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments