ಗೌರಿ ಹಂತಕರನ್ನ ಬಂಧಿಸಿ, ವಿಶ್ವಾಸ ಉಳಿಸಿಕೊಳ್ಳಿ: ಪ್ರತಿರೋಧ ಸಮಾವೇಶದಲ್ಲಿ ವಿಚಾರವಾದಿಗಳ ಆಗ್ರಹ

Webdunia
ಮಂಗಳವಾರ, 12 ಸೆಪ್ಟಂಬರ್ 2017 (16:18 IST)
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ ಪ್ರಗತಿಪರರು, ವಿಚಾರವಾದಿಗಳು ಬೃಹತ್ ಪ್ರತಿರೋಧ ಸಮಾವೇಶ ನಡೆಸುತ್ತಿದ್ದಾರೆ. ಸೆಂಟ್ರಲ್ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಬೃಹತ್ ಸಮಾವೇಶದಲ್ಲಿ ಗೌರಿ ಹಂತಕರ ಬಂಧನಕ್ಕೆ ಒಕ್ಕೊಲರ ಆಗ್ರಹ ಕೇಳಿ ಬರುತ್ತಿದೆ.

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಬಗ್ಗೆ ಪ್ರಧಾನಮಂತ್ರಿ ನರೇಂದ್ರಮೋದಿ ಯಾಕೆ ಮೌನವಹಿಸಿದ್ದಾರೆ..? ಎಂದು ಪರಿಸರವಾದಿ ಮೇಧಾ ಪಾಟ್ಕರ್ ಪ್ರಶ್ನಿಸಿದ್ದಾರೆ. ಪ್ರಕರಣವನ್ನ ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ಒಪ್ಪಿಸಿದೆ. ಪ್ರಕರಣದ ಬಗ್ಗೆ ಸೂಕ್ತ ತನಿಖೆಯಾಗಬೇಕು, ಹಂತಕರ ಬಂಧನವಾಗಬೇಕು. ಹಂತಕರನ್ನ ಬಂಧಿಸುವ ಮೂಲಕ ವಿಶ್ವಾಸ ುಳಿಸಿಕೊಳ್ಳಿ ಎಂದು ಸರ್ಕಾರಕ್ಕೆ ಮೇಧಾ ಪಾಟ್ಕರ್ ಒತ್ತಾಯಿಸಿದ್ದಾರೆ.

ಬೃಹತ್ ಸಮಾವೇಶದಲ್ಲಿ ರಾಜ್ಯ ಮತ್ತು ದೇಶದ ವಿವಿಧೆಡೆಯಿಂದ ಆಗಮಿಸಿರುವ ವಿಚಾರವಾದಿಗಳು, ಸಾಹಿತಿಗಳು ಸಮಾವೇಶದಲ್ಲಿ ಭಾಗವಹಿಸಿದ್ದಾರೆ. ಸಿಪಿಐ ಮುಖಂಡ ಸೀತಾರಾಮ್ ಯೆಚೂರಿ,  ಸ್ವಾಮಿ ಅಗ್ನಿವೇಶ್, ಗಿರೀಶ್ ಕಾರ್ನಾಡ್, ಕವಿತಾ ಲಂಕೇಶ್, ಗೌರಿ ಲಂಕೇಶ್ ತಾಯಿ ಇಂದಿರಾ ಲಂಕೇಶ್, ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಸೇರಿದಂತೆ ಹಲವರು ಸಮಾವೇಶದಲ್ಲಿ ಭಾಗವಹಿಸಿದ್ದಾರೆ. ನರೇಂದ್ರ ದಾಬೋಲ್ಕರ್, ಗೋವಿಂದ್ ಪನ್ಸಾರೆ, ಎಂ.ಎಂ. ಕಲ್ಬುರ್ಗಿ, ಗೌರಿಲಂಕೇಶ್ ಸೇರಿದಂತೆ ವಿಚಾವಾದಿಗಳ ಹತ್ಯೆ ಬಗ್ಗೆ ವಿಶ್ವಸಂಸ್ಥೆಗೆ ದೂರು ನೀಡಲು ನಿರ್ಧರಿಸಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments