Select Your Language

Notifications

webdunia
webdunia
webdunia
Sunday, 13 April 2025
webdunia

ಸುಮಲತಾ ವಿರುದ್ಧ ರೇವಣ್ಣ ಹೇಳಿಕೆ ವಿಚಾರ; ರೇವಣ್ಣ ಪರವಾಗಿ ಕ್ಷಮೆ ಕೇಳಿದ ಸಿಎಂ

ಸುಮಲತಾ ಅಂಬರೀಶ್
ಬೆಂಗಳೂರು , ಭಾನುವಾರ, 10 ಮಾರ್ಚ್ 2019 (13:55 IST)
ಬೆಂಗಳೂರು : ಸುಮಲತಾ ಅಂಬರೀಶ್ ಅವರ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದ ಸಚಿವ ಹೆಚ್.ಡಿ. ರೇವಣ್ಣ ಪರವಾಗಿ 2 ದಿನಗಳ ಬಳಿಕ ಅವರ ಸಹೋದರ, ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಕ್ಷಮೆ ಕೇಳಿದ್ದಾರೆ.


ಮುಂಬರುವ ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲು ನಟಿ ಸುಮಲತಾ ಅಂಬರೀಶ್ ಅವರು ಇಚ್ಚಿಸಿದ್ದರು. ಆದರೆ ಈ ವಿಚಾರವಾಗಿ ಮಾತನಾಡಿದ  ಸಚಿವ ಹೆಚ್.ಡಿ. ರೇವಣ್ಣ, ಗಂಡ ಸತ್ತು ಇನ್ನೂ ಆರು ತಿಂಗಳು ಕಳೆದಿಲ್ಲ. ಈಗಾಗಲೇ ಸುಮಲತಾಗೆ ರಾಜಕಾರಣ ಯಾಕೆ ಬೇಕಿತ್ತು? ಎಂದು ಹೇಳಿಕೆ ನೀಡಿದ್ದರು. ಈ ಬಗ್ಗೆ ರಾಜಕೀಯ ವಲಯದಲ್ಲಿ ಬಾರೀ ವಿರೋಧ ವ್ಯಕ್ತವಾಗಿದೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು, ‘ರೇವಣ್ಣ ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಬೇಕಿತ್ತು. ನಮ್ಮ ಕುಟುಂಬ ಯಾವ ಹೆಣ್ಣುಮಕ್ಕಳಿಗೂ ಅವಮಾನ ಮಾಡಿಲ್ಲ. ರೇವಣ್ಣ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ನಾನು ಅವರ ಪರವಾಗಿ ಕ್ಷಮೆ ಕೋರುತ್ತೇನೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಮೋದಿ ಭಯೋತ್ಪಾದಕರಂತೆ ವರ್ತಿಸತ್ತಿದ್ದಾರೆ- ಕಾಂಗ್ರೆಸ್ ನಾಯಕಿ ವಿಜಯಶಾಂತಿ ವಿವಾದಾತ್ಮಕ ಹೇಳಿಕೆ