Webdunia - Bharat's app for daily news and videos

Install App

ಸಿಎಂ ಕಚೇರಿ ಎದುರು ಧರಣಿ ನಡೆಸುವುದಾಗಿ ರೇವಣ್ಣ ಎಚ್ಚರಿಕೆ

Webdunia
ಮಂಗಳವಾರ, 18 ಜನವರಿ 2022 (20:53 IST)
ಬೆಂಗಳೂರು: ಹೊಳೆನರಸಿಪುರದಲ್ಲಿ ಮೈಸೂರು ವಿಶ್ವವಿದ್ಯಾನಿಲಯದಿಂದ ಹೊಸದಾಗಿ ಎಂ.ಎಸ್ಸಿ ಸೈಕಾಲಜಿ ಮತ್ತು ಎಂಎಸ್ಸಿ ಫುಡ್ & ನ್ಯೂಟ್ರಿಷನ್ ಸೇರಿದಂತೆ 12 ಸ್ನಾತಕೋತ್ತರ ಕೋರ್ಸಗಳನ್ನು ಮಂಜೂರು ಮಾಡುವ ಬೇಡಿಕೆ ನಿರಾಕರಣೆ ಮಾಡಿರುವುದನ್ನು ಖಂಡಿಸಿ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಧರಣಿ ನಡೆಸುವುದಾಗಿ ತಿಳಿಸಿದ್ದಾರೆ.
ಕೃಷ್ಣಾಗೆ ಆಗಮಿಸಿದ ರೇವಣ್ಣ ಹೊಳೆನರಸೀಪುರ ಸರ್ಕಾರಿ ಮಹಿಳಾ ಗೃಹ ವಿಜ್ಞಾನ ಕಾಲೇಜಿಗೆ 2022-23ನೇ ಶೈಕ್ಷಣಿಕ ಸಾಲಿಗೆ ಮೈಸೂರು ವಿಶ್ವವಿದ್ಯಾನಿಲಯದಿಂದ ಹೊಸದಾಗಿ ಎಂ.ಎಸ್ಸಿ ಸೈಕಾಲಜಿ ಮತ್ತು ಎಂಎಸ್ಸಿ ಫುಡ್ & ನ್ಯೂಟ್ರಿಷನ್ ಸೇರಿದಂತೆ 12 ಸ್ನಾತಕೋತ್ತರ ಕೋರ್ಸಗಳನ್ನು ಮಂಜೂರು ಮಾಡಲು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಉನ್ನತ ಶಿಕ್ಷಣ ಇಲಾಖೆಗೆ ಶಿಫಾರಸ್ಸು ಮಾಡಿದ್ದರು. ಆದ್ರೂ ಸಹ ಉನ್ನತ ಶಿಕ್ಷಣ ಸಚಿವರು ಪ್ರಸ್ತಾವನೆಯನ್ನು ತಿರಸ್ಕರಿಸಿರುವುದು ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ಆರೋಪಿಸಿದ್ದಾರೆ.
ನನ್ನ ಕ್ಷೇತ್ರದ ಶೈಕ್ಷಣಿಕ ಹಿತದೃಷ್ಟಿಯಿಂದ ಇದನ್ನು ಪ್ರತಿಭಟಿಸುವ ಸಲುವಾಗಿ ಮುಖ್ಯಮಂತ್ರಿಯವರ ಗೃಹಕಛೇರಿ ” ಕೃಷ್ಣಾ ” ದ ಆವರಣದಲ್ಲಿ ಕೊರೊನಾ ನಿಯಮ ಪಾಲಿಸಿ ಏಕಾಂಗಿಯಾಗಿ ಧರಣಿ ನಡೆಸಲು ನಿರ್ಧರಿಸಿದ್ದೇನೆ ಎಂದು ಕೃಷ್ಣಾವನ್ನು ಪ್ರವೇಶಿಸಿದ್ದು, ಸಿಎಂ ಕಚೇರಿ ಸಿಬ್ಬಂದಿ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ಬೇಡಿಕೆ ಈಡೇರದೇ ಇದ್ದಲ್ಲಿ ರೇವಣ್ಣ ಕೃಷ್ಣಾದಲ್ಲೇ ಧರಣಿ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Kerala Rains: ಕಾಸರಗೋಡಿನಲ್ಲಿ ವಿಪರೀತ ಮಳೆ, ಮಧೂರು ದೇವಾಲಯದೊಳಗೇ ನುಗ್ಗಿದ ನೀರು

KSRTC Tour package: ಹೊಸ ಟೂರ್ ಪ್ಯಾಕೇಜ್, ಕಡಿಮೆ ದರದಲ್ಲಿ ಮೂರು ಸ್ಥಳಗಳಿಗೆ ಟೂರ್, ವಿವರ ಇಲ್ಲಿದೆ

ಯುಪಿಎ ಕಾಲದಲ್ಲಿಆರು ಬಾರಿ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೆವು ಎಂದ ರಣದೀಪ್ ಸುರ್ಜೇವಾಲಾ

Bantwal Murder: ಮುಸ್ಲಿಮರ ಆಕ್ರೋಶಕ್ಕೆ ಬೆಚ್ಚಿದ ಸರ್ಕಾರ, ರಾಜ್ಯಕ್ಕೆ ಹೊಸ ಹೋಂ ಮಿನಿಸ್ಟರ್ ಬರ್ತಾರಾ

ಮುಂದಿನ ಸುದ್ದಿ
Show comments