Webdunia - Bharat's app for daily news and videos

Install App

ಖಾಸಗಿ ರೆಸಾರ್ಟ್‌ನ ನಿರ್ಜನ ಪ್ರದೇಶದಲ್ಲಿ ತಡ ರಾತ್ರಿ 30-40 ಜನರು ರೇವ್‌ ಪಾರ್ಟಿ

Webdunia
ಭಾನುವಾರ, 19 ಸೆಪ್ಟಂಬರ್ 2021 (20:28 IST)
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿನ್ನೆ ವೀಕೆಂಡ್ ಪಾರ್ಟಿ ಜೋರಾಗಿತ್ತು. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಬಳಿಯ ಖಾಸಗಿ ರೆಸಾರ್ಟ್‌ನ ನಿರ್ಜನ ಪ್ರದೇಶದಲ್ಲಿ ತಡ ರಾತ್ರಿ 30-40 ಜನರು ರೇವ್‌ ಪಾರ್ಟಿ ಮಾಡಿದ್ದಾರೆ. ರೇವ್‌ ಪಾರ್ಟಿ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರ ದಾಳಿ ನಡೆಸಿದ್ದು ಡ್ರಗ್ಸ್ ನಶೆಯಲ್ಲಿ ತೇಲುತ್ತಿದ್ದ ಯುವಕ, ಯುವತಿಯರು ಪೊಲೀಸರು ದಾಳಿ ಮಾಡುತ್ತಿದ್ದಂತೆ ಪರಾರಿಯಾಗಿದ್ದಾರೆ. ಎದ್ದುಬಿದ್ದು ಓಡಿಹೋಗಿದ್ದಾರೆ. ಈ ಪೈಕಿ ಸದ್ಯ ಡ್ರಗ್ಸ್ ನಶೆಯಲ್ಲಿದ್ದ 11 ಜನರನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
 
ಇನ್ನು ರೇವ್‌ ಪಾರ್ಟಿಯಲ್ಲಿ ಗಾಂಜಾ, ಮರಿಜುವಾನ ಸೇರಿದಂತೆ ವಿವಿಧ ಡ್ರಗ್ಸ್ಗಳನ್ನು ಬಳಸಲಾಗುತ್ತಿತ್ತಂತೆ. ರೇವ್ ಪಾರ್ಟಿಯ ಡ್ರಗ್ಸ್ ಜಾಲದಲ್ಲಿ ವಿದ್ಯಾರ್ಥಿಗಳು, ಶ್ರೀಮಂತರ ಮಕ್ಕಳು ಭಾಗಿಯಾಗಿದ್ದಾರೆ. ಡ್ರಗ್ಸ್ ಸೇವಿಸಿ ನಾವು ತಪ್ಪೇ ಮಾಡಿಲ್ಲ ಎಂಬಂತೆ ಪೊಲೀಸರ ಮುಂದೆ ನಟಿಸಿದ್ದಾರೆ. ಮ್ಯೂಸಿಕ್ ಕಂಪನಿಯೊಂದು ಈ ಪಾರ್ಟಿ ಆಯೋಜಿಸಿತ್ತು. ಪಾರ್ಟಿಯಲ್ಲಿದ್ದವರಲ್ಲಿ ಬಹುತೇಕರು ಹೊರರಾಜ್ಯದವರು ಎಂದು ತಿಳಿದು ಬಂದಿದೆ. ಕೇರಳ, ಉತ್ತರ ಪ್ರದೇಶ ಮೂಲದವರು ಭಾಗಿ ಮಾಹಿತಿ ಸಿಕ್ಕಿದ್ದು ರಾಜ್ಯದ ಕೆಲ ವಿದ್ಯಾರ್ಥಿಗಳು ಸೇರಿದಂತೆ ಕನ್ನಡದ ವಿದ್ಯಾರ್ಥಿಗಳೂ ಕೂಡ ಪಾರ್ಟಿಯಲ್ಲಿ ಭಾಗಿಯಾಗಿದ್ರು ಎಂಬ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ.
 
ಡ್ರಗ್ಸ್ ಪೆಡ್ಲರ್‌ಗಳು, ರಷ್ಯಾದಿಂದ ಮಾಡೆಲ್, ಡಿಜೆ ಕರೆಸಿ ಜಂಗಲ್ ಸಫಾರಿ ಹೆಸರಿನಲ್ಲಿ ಈ ರೇವ್ ಪಾರ್ಟಿ ನಡೆಸುತ್ತಿದ್ದರು ಎಂಬುವುದ ತಿಳಿದು ಬಂದಿದೆ. ಮೊದಲು‌ ಇನ್‌ಸ್ಟಾ ಗ್ರಾಂನಲ್ಲಿ ಪಾರ್ಟಿಗೆ ಸದಸ್ಯರ ಆಯ್ಕೆ ಮಾಡಿ ಬಳಿಕ ಎಲ್ಲರೂ ಗೌಪ್ಯವಾಗಿ ಒಂದೆಡೆ ಸೇರಲು ಸ್ಕ್ಯಾನರ್ ಬಳಕೆ ಮಾಡಲಾಗಿದೆ. ಹೆಸರು ನೋಂದಣಿಗೆ 1000, 2000, 5000 ರೂ. ನಿಗದಿ ಮಾಡಿದ್ದಾರೆ. ಸ್ಕ್ಯಾನ್ ಆದರೆ ಮಾತ್ರ ರೇವ್ ಪಾರ್ಟಿ ಒಳಗಡೆ ಪ್ರವೇಶ ನೀಡಲಾಗುತ್ತಿದ್ದು ಒಳಗೆ ಪ್ರವೇಶದ ವೇಳೆ ಬಲಗೈಗೆ ಮ್ಯೂಸಿಕ್ ಕಂಪನಿಯ ಗುರುತಿನ ಸೀಲ್ ಒತ್ತುವ ಮೂಲಕ ಒಳಗಡೆ ಎಂಟ್ರಿ ಕೊಡಲಾಗುತ್ತಿತ್ತು. ಜಂಗಲ್ ಸಫಾರಿ ಪಾರ್ಟಿಯಲ್ಲಿ ಪಾಲ್ಗೊಳ್ಳುವ ಡ್ರಗ್ಸ್ ಪೆಡ್ಲರ್‌ಗಳಿಂದ ನೇರವಾಗಿ ಡ್ರಗ್ಸ್ ಖರೀದಿಸಿ ಮೋಜು ಮಸ್ತಿ ಮಾಡಲಾಗುತ್ತಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments