ರವಿ ಬೆಳಗೆರೆಗೆ ಮೂರು ದಿನಗಳ ಷರತ್ತುಬದ್ಧ ಜಾಮೀನು

Webdunia
ಬುಧವಾರ, 13 ಡಿಸೆಂಬರ್ 2017 (16:58 IST)
ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಪ್ರಕರಣದಲ್ಲಿ ಹಾಯ್ ಬೆಂಗಳೂರು ಸಂಸ್ಥಾಪಕ ರವಿ ಬೆಳಗೆರೆ ಅವರಿಗೆ ಮೂರು ದಿನಗಳ ಮಧ್ಯಂತರ ಜಾಮೀನು ದೊರೆತಿದೆ.
 
ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ನಗರದ ಸಿಟಿ ಸಿವಿಲ್ ಕೋರ್ಟ್ ಬುಧವಾರ ಮೂರು ದಿನಗಳ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
 
ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದಾರೆ. 
 
ತನಿಖೆಗೆ ಸಹಕರಿಸುವಂತೆ ಸೂಚಿಸಿರುವ ಕೋರ್ಟ್ ಕೆಲವು ಷರತ್ತು ವಿಧಿಸಿ ಡಿಸೆಂಬರ್ 16ರವರೆಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 1 ಲಕ್ಷ ರೂ. ಭದ್ರತೆ ಮತ್ತು ಇಬ್ಬರು ಶ್ಯೂರಿಟಿ ನೀಡಲು ತಿಳಿಸಿದೆ.
 
ಯಾವುದೇ ದೂರಿಲ್ಲದೇ ತನಿಖೆ ನಡೆಸಲಾಗಿದೆ. ಆರೋಪಿಯೊಬ್ಬನ ಹೇಳಿಕೆ ಆಧರಿಸಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಜಾಮೀನು ನೀಡಬೇಕೆಂದು ವಕೀಲ ದಿವಾಕರ್ ರವಿ ಬೆಳಗೆರೆ ಪರ ವಾದ ಮಂಡಿಸಿದ್ದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬಾರೆ ಆನೆ ಶಿಬಿರದಲ್ಲಿ ಆನೆಗಳ ಕಾಳಗದ ಮಧ್ಯೆ ಸಿಲುಕಿದ ಚೆನ್ನೈ ಮೂಲದ ಮಹಿಳೆ: ಭೀಕರ Video

ವೇದಿಕೆಗೆ ಬಂದು ರಾಹುಲ್ ಗಾಂಧಿಯನ್ನು ಸೀದಾ ತಬ್ಬಿಕೊಂಡ ಅಜ್ಜಿVideo

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಎರಡು ಗ್ಯಾರಂಟಿ ಘೋಷಿಸಿದ ವಿ.ಡಿ ಸತೀಶನ್‌

ಇದೇ 20ರಂದು ಮುಷ್ಕರಕ್ಕೆ ಸಿದ್ಧತೆ ನಡೆಸಿದ್ದ ಸಾರಿಗೆ ನೌಕರರಿಗೆ ಕೆಎಸ್‌ಆರ್‌ಟಿಸಿ ಬಿಗ್‌ಶಾಕ್‌

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments