Select Your Language

Notifications

webdunia
webdunia
webdunia
webdunia

ಶೀಘ್ರದಲ್ಲಿಯೇ ಭಾರತಕ್ಕೆ ಹಸ್ತಾಂತರವಾಗಲಿರುವ ಭೂಗತ ಪಾತಕಿ ರವಿ ಪೂಜಾರಿ

ಶೀಘ್ರದಲ್ಲಿಯೇ ಭಾರತಕ್ಕೆ ಹಸ್ತಾಂತರವಾಗಲಿರುವ ಭೂಗತ ಪಾತಕಿ ರವಿ ಪೂಜಾರಿ
ಬೆಂಗಳೂರು , ಭಾನುವಾರ, 23 ಫೆಬ್ರವರಿ 2020 (12:02 IST)
ಬೆಂಗಳೂರು: ಭೂಗತ ಪಾತಕಿ ರವಿ ಪೂಜಾರಿ ಅವರನ್ನು ಶೀಘ್ರದಲ್ಲಿಯೇ ಭಾರತಕ್ಕೆ ಹಸ್ತಾಂತರ ಮಾಡಲು ದಕ್ಷಿಣ ಆಫ್ರಿಕಾದ ಸರ್ಕಾರ ತಿಳಿಸಿದೆ.


ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿರುವ ಭೂಗತ ಪಾತಕಿ ರವಿ ಪೂಜಾರಿಯನ್ನು ಆಫ್ರಿಕಾದ ಸೆನೆಗಲ್ ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದರು. ಆತನನ್ನು ವಶಕ್ಕೆ ಪಡೆಯಲು ರಾಜ್ಯ ಪೊಲೀಸರು  ಪ್ರಯತ್ನಿಸಿದ್ದರು. ಆದರೆ ಕಾನೂನು ತೊಡಕುಗಳಿಂದ ಹಸ್ತಾಂತರ ಸಾಧ್ಯವಾಗಿರಲಿಲ್ಲ.


ಆದರೆ ಇದೀಗ ಎಲ್ಲಾ ಕಾನೂನು ತೊಡಕುಗಳು ನಿವಾರಣೆಯಾಗಿದ್ದು , ಆತನನ್ನು ನಾಲ್ಕೈದು ದಿನಗಳಲ್ಲಿ ಭಾರತಕ್ಕೆ ಹಸ್ತಾಂತರ ಮಾಡಲು ದಕ್ಷಿಣ ಆಫ್ರಿಕಾದ ಸರ್ಕಾರ ಒಪ್ಪಿಗೆ ನೀಡಿದೆ. ಮುಂಬೈ ಪೊಲೀಸರು ಮೊದಲು ಈತನನ್ನು ವಶಕ್ಕೆ ಪಡೆಯಲಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಪೆಟ್ರೋಲ್ ಬೆಲೆಯಲ್ಲಿ ಏರಿಕೆ, ಡಿಸೇಲ್ ಬೆಲೆಯಲ್ಲಿ ಸ್ಥಿರತೆ