Select Your Language

Notifications

webdunia
webdunia
webdunia
webdunia

ರವಿಕುಮಾರ್‌ ಕಾಲೆಳೆದ ಸಿಎಂ ಸಿದ್ದರಾಮಯ್ಯ

cm sidaramayya
ಬೆಂಗಳೂರು : ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸುವ ಸಂದರ್ಭದಲ್ಲಿ ತಮ್ಮ ಮಾತಿಗೆ ಮಧ್ಯ ಪ್ರವೇಶಿಸಿದ ಪೂಜಾರ್ ಮತ್ತು ರವಿಕುಮಾರ್ ಅವರಿಗೆ ನಾವೂ ಶೂದ್ರರು, ನೀವೂ ಶೂದ್ರರು  ಇದೆಲ್ಲಾ ಬೇಕಾ ಎಂದು ಕಾಲೆಳೆದರು.ನಾನೂ ಶೂದ್ರ-ನೀವೂ ಶೂದ್ರರು-ರವಿಕುಮಾರ್ ಕೂಡ ಶೂದ್ರರು. ಹೀಗಿದ್ದೂ ಯಾಕ್ರೀ ಇದೆಲ್ಲಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯ ಶ್ರೀನಿವಾಸ್ ಪೂಜಾರಿ ಮತ್ತು ರವಿಕುಮಾರ್ ಅವರನ್ನು ಪ್ರಶ್ನಿಸಿದ ಘಟನೆ ಬುಧವಾರ ನಡೆಯಿತು. 

ಪ್ರಬಲ ವಿರೋಧ ಪಕ್ಷ ಪ್ರಜಾಪ್ರಭುತ್ವಕ್ಕೆ ಪೂರಕ. ಆಪರೇಷನ್ ಕಮಲ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು  ನುಡಿದ ಸಿಎಂ, ಕುವೆಂಪು ಅವರ ಸರ್ವೋದಯವಾಗಲಿ ಸರ್ವರಲಿ ಎನ್ನುವ ಮಾತನ್ನು ಉಲ್ಲೇಖಿಸಿದರು.ಜೊತೆಗೆ,  ಕುವೆಂಪು ಆಶಯ ಇಟ್ಟುಕೊಂಡು ಇನ್ನೂ ಬಿಜೆಪಿ-ಜೆಡಿಎಸ್ ಜತೆಗಿದ್ದೀರಿ ಏಕೆ ಎಂದು ಪ್ರಶ್ನಿಸಿದ ಸಿಎಂ,    ಈಗ ನಿಮ್ಮದು JD "S" ಅಲ್ಲ ಈಗ JD "C" ಆಗಿದೆ ಅಂದರು. ಇದಕ್ಕೆ ಕಾಂಗ್ರೆಸ್ ಸದಸ್ಯರು C ಫಾರ್ ಕಮ್ಯುನಲ್ ಎಂದು ಟೀಕಿಸಿದರು. 
 

Share this Story:

Follow Webdunia kannada

ಮುಂದಿನ ಸುದ್ದಿ

ಫೆ.27ರಂದು ಕುಡಿಯುವ ಕಾವೇರಿ ನೀರಿನ ಪೂರೈಕೆ ಸ್ಥಗಿತ