Webdunia - Bharat's app for daily news and videos

Install App

ಆರ್`ಬಿಐ ತ್ಯಾಜ್ಯವೇ ಶ್ಯಾದನಹಳ್ಳಿ ಬೆಂಕಿ ದುರಂತಕ್ಕೆ ಕಾರಣ: ಎಚ್`ಡಿಕೆ ಗಂಭೀರ ಆರೋಪ

Webdunia
ಸೋಮವಾರ, 17 ಏಪ್ರಿಲ್ 2017 (13:17 IST)
ಮೈಸೂರಿನ ಶ್ಯಾದನಹಳ್ಳಿಯ ಭೂಮಿಯಲ್ಲಿ ರಾಸಾಯನಿಕದಿಂದ ಬೆಂಕಿ ಹೊತ್ತಿಕೊಂಡು ಬಾಲಕನೊಬ್ಬ ಬಲಿಯಾದ ಬಳಿಕ ಪ್ರಕರಣ ಕುರಿತಂತೆ ಒಂದೊಂದೇ ವಿಷಯಗಳು ಹೊರಬರುತ್ತಿವೆ. ಸಮೀಪದಲ್ಲಿರುವ ಆರ್`ಬಿಐ ನೋಟು ಮುದ್ರಣ ಕೇಂದ್ರದ ರಾಸಾಯನಿಕ ತ್ಯಾಜ್ಯದಿಂದಲೇ ಈ ಅವಘಡ ಸಂಭವಿಸಿದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ತಪ್ಪಿತಸ್ಥರು ಸರ್ಕಾರವೇ ಆದರೂ ಸರಿ ಕಠಿಣ ಕ್ರಮ ಜರುಗಿಸುವಂತೆ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಇತ್ತೀಚೆಗೆ ತಾನೆ ಇಲ್ಲಿನ ಆರ್`ಬಿಐ ಕೇಂದ್ರದಲ್ಲಿ ಹೊಸ ನೋಟುಗಳನ್ನ ಮುದ್ರಿಸಲಾಗಿದ್ದು, ನೋಟು ಮುದ್ರಣದ ಬಳಿಕ ಆ ರಾಸಾಯನಿಕ ತ್ಯಾಜ್ಯವನ್ನ ಎಲ್ಲಿ ಎಸೆದಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

ಇತ್ತ, ಪ್ರದೇಶಕ್ಕೆ ಸಚಿವ ಎಚ್`.ಸಿ. ಮಹದೇವಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಿಸರ ಮಾಲಿನ್ಯ ನಿಯಂತ್ರಣಾಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಸಮೀಪಕ್ಕೆ ಯಾರೂ ಬರದಂತೆ ನಿಷೇಧಾಜ್ಞೆ ವಿಧಿಸಲಾಗಿದೆ.
ಇನ್ನೂ, ದುರಂತ ಸಂಭವಿಸಿರುವ ಪ್ರದೇಶ ಸಿಎಂ ಸಿದ್ದರಾಮಯ್ಯ ವರುಣಾ ಕ್ಷೇತ್ರಕ್ಕೆ ಸೇರಿದ್ದಾಗಿದ್ದು, ಕೂಗಳತೆ ದೂರದಲ್ಲಿ ವರುಣಾ ನಾಲೆ ಮತ್ತು ಆರ್`ಬಿಐ ನೋಟು ಮುದ್ರಣ ಕೇಂದ್ರವಿದೆ.

ಈ ಮಧ್ಯೆ, ಬೆಂಕಿಯ ಕೆನ್ನಾಲಿಗಗೆ ಸಿಲುಕಿ ಮೃತಪಟ್ಟ ಬಾಲಕನ ಪಾರ್ಥಿವ ಶರೀರರವನ್ನ ಕೆ.ಆರ್. ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಸ್ವಗ್ರಾಮಕ್ಕೆ ತರಲಾಗಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments