ಮೇಲ್ಮನೆ ಚುನಾವಣೆ ಸಕಲ ಸಿದ್ದತೆ

Webdunia
ಬುಧವಾರ, 8 ಡಿಸೆಂಬರ್ 2021 (17:50 IST)
ವಿಧಾನ ಪರಿಷತ್ ದ್ವೈ ವಾರ್ಷಿಕ ಚುನಾವಣೆ-2021 ಡಿ.10ರಂದು ನಡೆಯಲಿರುವ ಮತದಾನದ ಹಿನ್ನಲೆಯಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದ್ದು, ಮತದಾರರು ಕೋವಿಡ್ ಲಸಿಕೆ ಪಡೆದಿರಬೇಕೆಂದು ಸೂಚಿಸಲಾಗಿದೆ ಎಂದು ಚುನಾವಣಾಧಿಕಾರಿ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್ ತಿಳಿಸಿದ್ದಾರೆ.ನಗರದಲ್ಲಿಂದು ಕೆ.ಜಿ.ರಸ್ತೆಯ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಚುನಾವಣೆ ಪ್ರಕ್ರಿಯೆಯಲ್ಲಿ ಭಾಗಿಯಾಗುವ ಸಿಬ್ಬಂದಿ, ಮತದಾರರು ಕೋವಿಡ್ ಲಸಿಕೆ ಪಡೆದಿರಬೇಕು ಎಂದು ಸೂಚಿಸಲಾಗಿದೆ. ಈ ಸಂಬಂಧ ಪ್ರಮಾಣ ಪತ್ರವನ್ನು ಸಿಬ್ಬಂದಿ ಪರಿಶೀಲನೆ ನಡೆಸಲಾಗುವುದು ಎಂದರು.
 
ಈ ಮತದಾನ ಪ್ರಕ್ರಿಯೆಯಲ್ಲಿ ಬ್ಯಾಲೆಟ್ ಕಾಗದ ಮುಖ್ಯವಾಗಿದ್ದು, ಇದನ್ನು ಮತದಾರರು ಹೊರಗಡೆ ತೆಗೆದುಕೊಂಡು ಹೋದರೆ ಅಥವಾ ದುರ್ಬಳಕೆ ಮಾಡಿಕೊಂಡರೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಮತದಾರರು ಎಚ್ಚರ ವಹಿಸುವುದು ಸೂಕ್ತ ಎಂದು ತಿಳಿಸಿದರು.
 
ರಾಜ್ಯ ವಿಧಾನ ಪರಿಷತ್ತಿನ ಬೆಂಗಳೂರು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಡಿ. 10ರಂದು ನಡೆಯಲಿರುವ ಕಾರಣ ಸಾರ್ವಜನಿಕ ಸಭೆ, ಸಮಾರಂಭಗಳು, ಬೈಕ್ ರ್ಯಾಲಿ, ಬೀದಿ ನಾಟಕ ಮುಂತಾದ ಬಹಿರಂಗ ಪ್ರಚಾರಗಳನ್ನು ಮತದಾನ ಮುಕ್ತಾಯಗೊಳ್ಳುವ 72 ಗಂಟೆಗಳ ಮುಂಚಿತವಾಗಿಯೇ ನಿಲ್ಲಿಸುವಂತೆ ಹಾಗೂ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಈಗಾಗಲೇ ಸೂಚಿಸಲಾಗಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನಗೆ ಅದ್ಧೂರಿ ಬದುಕ ಬೇಡ, ಕನಿಷ್ಠ ಭದ್ರತೆ ಸಾಕೆಂದ ಕೇರಳದ ನೂತನ ಸಿಎಂ ಸತೀಶನ್

ಪ್ರಧಾನಿ ಮೋದಿ ಏನೇ ಮಾಡಿದ್ರೂ ಅಂಧ ಭಕ್ತರು ಸಂತೋಷ ಪಡ್ತಾರೆ: ಸಚಿವ ಸುಧಾಕರ್

ವಾಡಿಕೆಗಿಂತ ಆರು ದಿನ ಮುಂಚಿತವಾಗಿ ಮಾನ್ಸೂನ್ ಕೇರಳಕ್ಕೆ, ಇಲ್ಲಿದೆ ಮಾಹಿತಿ

ಶಿವಮೊಗ್ಗದಲ್ಲಿ ಒಂದೇ ಮೈದಾನದಲ್ಲಿ 5ಸಾವಿರ ಕ್ರಿಕೆಟ್ ಪಂದ್ಯ ವೀಕ್ಷಿಸಬಹುದು

ವಿಜಯ್‌ಗೆ ಕರೆ ಮಾಡಿ ನಿಮ್ಮ ಜತೆ ನಾವಿದ್ದೇವೆಂದ ಡಿಕೆ ಶಿವಕುಮಾರ್‌, Video

ಮುಂದಿನ ಸುದ್ದಿ
Show comments