Select Your Language

Notifications

webdunia
webdunia
webdunia
webdunia

ಸಚಿವ ಸ್ಥಾನ ತ್ಯಾಗಕ್ಕೆ ಸಿದ್ಧ; ಜೆಡಿಎಸ್ ಗೆ ಶಾಕ್ ನೀಡಿದ್ಯಾಕೆ?

ಮೈತ್ರಿ ಸರಕಾರ
ಬೆಂಗಳೂರು , ಸೋಮವಾರ, 27 ಮೇ 2019 (17:07 IST)
ರಾಜ್ಯದ ಮೈತ್ರಿ ಸರ್ಕಾರ ಉರುಳಿರುವ ಪ್ರಯತ್ನ ಮೊದಲಿಂದಲು ನಡೀತಾ ಇದೆ. ಬಿಜೆಪಿಯವರ ಈ ಪ್ರಯತ್ನ ಸಫಲವಾಗಲ್ಲ ಅಂತ ಸಚಿವರೊಬ್ಬರು ಹೇಳಿದ್ದಾರೆ.

ಕಾಂಗ್ರೆಸ್- ಜೆಡಿಎಸ್ ಮುಖಂಡರು ಮಾತುಕತೆ ನಡೆಸಿದ್ದಾರೆ. ಯಾವ ಕಾರಣಕ್ಕೂ ಸರ್ಕಾರ ಬೀಳಲ್ಲ. ಸರ್ಕಾರ ಉಳಿಸಿಕೊಳ್ಳಲು ಬೇಕಾದ ಪ್ಲಾನ್ ಮಾಡ್ತಿದ್ದಾರೆ ಎಂದರು. ಮಂಡ್ಯದಲ್ಲಿ ನಿಖಿಲ್  ಕುಮಾರಸ್ವಾಮಿ ಸೋಲಿನ ಹಿನ್ನೆಲೆಯಲ್ಲಿ ರಾಜೀನಾಮೆಗೆ ಮುಂದಾಗಿದ್ದೆ. ಈಗಲು ನನ್ನ ನಿರ್ಧಾರಕ್ಕೆ ಬದ್ಧವಾಗಿದ್ದೇನೆ.

ಆದ್ರೆ ಇಂಥ ನಿರ್ಧಾರ ಸರಿಯಲ್ಲ ಎಂದು ಎರಡೂ ಪಕ್ಷದ ನಾಯಕರು ಹೇಳಿದ್ದಾರೆ. ಆ ಕಾರಣಕ್ಕಾಗಿ ಸುಮ್ಮನಿದ್ದೇನೆ. ಸದ್ಯದಲ್ಲೇ ಸಂಪುಟ ವಿಸ್ತರಣೆ ಆಗತ್ತೆ. ಸಚಿವ ಸ್ಥಾನ ತ್ಯಾಗಕ್ಕೂ ನಾನು ಸಿದ್ಧನಿದ್ದೇನೆ ಅಂತ ಹೆಚ್.ಡಿ.ದೇವೇಗೌಡರ ಭೇಟಿ ಬಳಿಕ ಸಚಿವ ಸಿ.ಎಸ್. ಪುಟ್ಟರಾಜು ಹೇಳಿಕೆ ನೀಡಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಎಸ್.ಎಂ.ಕೃಷ್ಣ ಕರೆ ಮಾಡಿದ್ರು- ಎಂ.ಬಿ.ಪಾಟೀಲ್ ಸಿಡಿಸಿದ್ರು ಹೊಸ ಬಾಂಬ್