Webdunia - Bharat's app for daily news and videos

Install App

ಸಿಎಂ ಪಟ್ಟಕ್ಕಾಗಿ ಸಿದ್ದು ಬಿಗಿಪಟ್ಟು

Webdunia
ಸೋಮವಾರ, 15 ಮೇ 2023 (17:44 IST)
2018ರಲ್ಲಿ ಇದೇ ತನ್ನ ಕೊನೆ ಚುನಾವಣೆ ಎಂದು ಹೇಳಿ ಮತಪ್ರಚಾರ ನಡೆಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಈ ಬಾರಿ ಚುನಾವಣೆಯಲ್ಲೂ ಸ್ಪರ್ಧಿಸಿದ್ರು.. ಇದೀಗ ತಾನೆ ಸಿಎಂ ಆಗಬೇಕೆಂದು ಪಟ್ಟು ಹಿಡಿದಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಮಧ್ಯಾಹ್ನ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. AICC ವರಿಷ್ಠರ ಭೇಟಿಗೆ ಸಿದ್ದರಾಮಯ್ಯ ಮುಂದಾಗಿದ್ದು, ಸಂಜೆ AICC ಅಧ್ಯಕ್ಷ ಮಲ್ಲಿಕಾರ್ಜುನ​​​ ಖರ್ಗೆ, ರಾಹುಲ್ ಗಾಂಧಿಯನ್ನು ಭೇಟಿ ಮಾಡಲಿದ್ದಾರೆ. ಹೈಕಮಾಂಡ್ ಮುಂದೆ ಸಿದ್ದರಾಮಯ್ಯ ವಾದವೇನು ಎಂಬುದನ್ನು ನೋಡುವುದಾದರೆ, ಅನುಭವ, ಹಿರಿತನಕ್ಕೆ ಮನ್ನಣೆ ಕೊಡಬೇಕು.. ಶಾಸಕರ ಅಭಿಪ್ರಾಯದಂತೆಯೇ ಸಿಎಂ ಹೆಸರು ಘೋಷಣೆ ಮಾಡಬೇಕು.. ವೀಕ್ಷಕರಿಂದ ಜನಾಭಿಪ್ರಾಯ ಸಂಗ್ರಹ ಮಾಡಿದರೂ ಸ್ವಾಗತ ಎಂದು ಹೇಳಿದ್ದಾರಂತೆ. ಇನ್ನು ನಾನು ಸಿಎಂ ಆಗಿದ್ದಾಗ ಕೊಟ್ಟ ಭಾಗ್ಯಗಳು ಜನಮನದಲ್ಲಿವೆ. ನನ್ನ ವರ್ಚಸ್ಸು ಹಾಗೂ ಅಹಿಂದ ಸಿದ್ದಾಂತ ಕೈ ಹಿಡಿದಿವೆ. ವಿಧಾನಸಭೆಯಲ್ಲಿ ಬಿಜೆಪಿ ಸರ್ಕಾರವನ್ನ ಕಟ್ಟಿಹಾಕಿದ್ದು ನಾನು. ಡಿಕೆಶಿಗೆ ಸಿಎಂ ಸ್ಥಾನ ನೀಡಿದ್ರೆ ನನ್ನ ಹಿರಿತನ, ವರ್ಚಸ್ಸಿಗೆ ಧಕ್ಕೆಯಾಗುತ್ತೆ ಎಂಬ ವಾದ ಸಿದ್ದರಾಮಯ್ಯನವರದ್ದಾಗಿದೆ. ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸೀಟು ಗೆಲ್ಲಿಸುವ ಹೊಣೆ ನನ್ನದು.. ಇದು ನನ್ನ ಕೊನೆಯ ಚುನಾವಣೆ, ಪುತ್ರ ಯತೀಂದ್ರ ಕ್ಷೇತ್ರ ತ್ಯಾಗ ಮಾಡಿದ್ದಾನೆ. ಐದು ವರ್ಷವೂ ಸಿಎಂ ಒಬ್ಬರೇ ಆಗಿರಬೇಕು. ಅನೇಕ ಬಾರಿ ಬಜೆಟ್ ಮಂಡಿಸಿದ್ದೇನೆ, ಆರ್ಥಿಕ ಪರಿಸ್ಥಿತಿ ಬಗ್ಗೆ ಗೊತ್ತಿದೆ ಎಂದು ವಾದ ಮಂಡಿಸುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಮುಂದಿನ ಸುದ್ದಿ
Show comments