Webdunia - Bharat's app for daily news and videos

Install App

ಪ್ರೇಮ ವಿವಾಹವಾದವರನ್ನು ಊರಿನಿಂದ ಹೊರಹಾಕಲು ಸಿದ್ಧರಾದರು!

Webdunia
ಬುಧವಾರ, 29 ಆಗಸ್ಟ್ 2018 (14:03 IST)
ಪ್ರೇಮ ವಿವಾಹವಾಗಿದ್ದಕ್ಕೆ ಗ್ರಾಮದಿಂದ ಹೊರ ಹಾಕಲು ಕುಟುಂಬಸ್ಥರೇ ಮುಂದಾಗಿದ್ದಾರೆ. ಗ್ರಾಮಸ್ಥರ ಒತ್ತಾಯಕ್ಕೆ ಮಣಿದು ಊರು ತೊರೆಯಲು ಒಪ್ಪದ ದಂಪತಿಗಳಿಗೆ ಜಿ ಪಂ ಸದಸ್ಯ ಹಾಗೂ ಸಂಗಡಿಗರಿಂದ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.

ಪ್ರೇಮ ವಿವಾಹ ಆದವರು ರಕ್ಷಣೆ ಕೋರಿ ಪೊಲೀಸ್ ಠಾಣೆಗೆ ಹೋದ್ರೆ ಪಿ ಎಸ್ ಐ ಹಾಗೂ ಸಿಬ್ಬಂದಿಗಳಿಂದಲೂ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ನೊಂದ ಮಹಿಳೆ 15 ಕ್ಕು ಹೆಚ್ಚು ಮಾತ್ರೆ ಸೇವಿಸಿ ಆತ್ಮಹತ್ಯೆ ಯತ್ನ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ  ಕಕಮರಿ ಗ್ರಾಮದ ರಮೇಶ ಕನ್ನೊಳ್ಳಿ ಮತ್ತು ಕವಿತಾ ಕನ್ನೊಳ್ಳಿ ದಂಪತಿ ಮೇಲೆ ರಾಜಕೀಯ ಪುಡಾರಿಗಳು ಮತ್ತು ಪೊಲೀಸ್ ರು ಹಲ್ಲೆ ಮಾಡಿದ್ದಾರೆ ಎಂಬ ಆರೋಪವನ್ನ ದಂಪತಿ ಮಾಡಿದ್ದಾರೆ.

 
ಐಗಳಿ ಪಿಎಸ್ ಐ ಬಿರಾದಾರ ಹಾಗೂ ಸಿಬ್ಬಂದಿ ಕುಂಬಾರ, ಎಎಸ್ಐ, ಜಿ.ಪಂ ಸದಸ್ಯ ಗುರು ದಾಸ್ಯಾಳ ಸೇರಿ ಹಲವರಿಂದ ಹಲ್ಲೆ  ನಡೆದಿದೆ ಎಂದು ಆರೋಪಿಸಿದ್ದಾರೆ. ಪಿಎಸ್ಐ ಬಿರಾದರ ಹಾಗೂ ಜಿ ಪಂ ಸದಸ್ಯ ಗುರುದಾಸ್ಯಾಳ ಮೇಲೆ ದೂರು ನೀಡಿದ್ರು ಸ್ವೀಕರಿಸದ ಐಗಳಿ ಪೊಲೀಸ್ ರಿಂದ ನೊಂದ ದಂಪತಿಗಳು ನ್ಯಾಯಕ್ಕಾಗಿ ಅಥಣಿ ಸಿಪಿಐ ಹೆಚ್. ಶೇಖರಪ್ಪ ಗೆ ದೂರು ನೀಡಲು ಮುಂದಾಗಿದ್ದರು. ಅಲ್ಲಿಯೂ ನ್ಯಾಯ ಸಿಗದಿದ್ದಾಗ ಕವಿತಾ ಕನ್ನೋಳ್ಳಿ ಪೊಲೀಸ್ ಠಾಣೆ ಯಲ್ಲೇ 15ಕ್ಕೂ ಹೆಚ್ಚು ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಮಾಡಿದ್ದು ಅಥಣಿ ಪೊಲೀಸರು ಮಹಿಳೆಗೆ ಅಥಣಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ.

ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ತಮಗೆ ಕಿರುಕುಳ ನೀಡಲಾಗುತ್ತಿದೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಪೊಲೀಸರು ಹಲ್ಲೆ ನಡೆಸಿದ್ದಾರೆ. ಪೋಷಕರ ಒಪ್ಪಿಗೆ ಇದ್ದರೂ ಕೂಡ ಗ್ರಾಮದ ಮುಖಂಡರು ತಮ್ಮ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ. ನಮಗೆ ನ್ಯಾಯ ಕೊಡಿಸಿ ಎಂದು ದಂಪತಿ ತಮ್ಮ ನೊವು ತೋಡಿಕೊಂಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಟೀಕೆಗಳ ಬಳಿಕ ಕೊನೆಗೂ ಹಣಕಾಸು ಆಯೋಗದ ಸಭೆಗೆ ಹೋಗಲು ತೀರ್ಮಾನಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments