Webdunia - Bharat's app for daily news and videos

Install App

ಬಿಜೆಪಿಗೆ ಮತಹಾಕದಿದ್ರೆ ಕಷ್ಟ ಎದುರಿಸಲು ಸಿದ್ದರಾಗಿ: ಮುಸ್ಲಿಮರಿಗೆ ಬಿಜೆಪಿ ನಾಯಕನ ಧಮ್ಕಿ

Webdunia
ಶುಕ್ರವಾರ, 17 ನವೆಂಬರ್ 2017 (13:50 IST)
ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಮತ ಹಾಕದಿದ್ರೆ ಕಷ್ಟ ಎದುರಿಸಲು ಸಿದ್ದರಾಗಿ ಎಂದು ಬಿಜೆಪಿ ಮುಖಂಡ ರಂಜೀತ್ ಕುಮಾರ್ ಶ್ರೀವಾಸ್ತವ್, ಮುಸ್ಲಿಮರಿಗೆ ನೇರ ಎಚ್ಚರಿಕೆ ನೀಡಿರುವ ಸಂದೇಶ ಇದೀಗ ವೈರಲ್ ಆಗಿದೆ.
 
ಉತ್ತರಪ್ರದೇಶದಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿರುವ ಪತ್ನಿ ಶಶಿ ಶ್ರೀವಾಸ್ತವ್ ಪರ ಪ್ರಚಾರ ನಡೆಸಿದ ಬಿಜೆಪಿ ಮುಖಂಡ ಶ್ರೀವಾಸ್ತವ್. ಬಿಜೆಪಿ ಪಕ್ಷ ಅಧಿಕಾರದಲ್ಲಿದೆ. ಪಕ್ಷಕ್ಕೆ ಮತಹಾಕದಿದ್ರೆ ಸಮಾಜವಾದಿ ಪಕ್ಷ ಕೂಡಾ ನಿಮ್ಮ ನೆರವಿಗೆ ಧಾವಿಸಲು ಸಾಧ್ಯವಿಲ್ಲ. ಆದ್ದರಿಂದ ಬಿಜೆಪಿಗೆ ಮತ ಹಾಕಿ ಎಂದು ಮುಸ್ಲಿಮರಿಗೆ ಗುಡುಗಿದ್ದಾರೆ. 
 
ಬಿಜೆಪಿ ಪಕ್ಷದಿಂದ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ. ಆದ್ದರಿಂದ ಕ್ಷೇತ್ರ ಅಭಿವೃದ್ಧಿಯಾಗಲು ಬಿಜೆಪಿಗೆ ಮತ ನೀಡಿ. ಇಲ್ಲವಾದಲ್ಲಿ ಹಿಂದೆ ಅನುಭವಿಸದಂತಹ ಕಷ್ಟ ಎದುರಿಸಬೇಕಾಗುತ್ತದೆ ಎಂದು ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.
 
ನಾನು ನಿಮಗೆ ಮತಭಿಕ್ಷೆ ಬೇಡುತ್ತಿಲ್ಲ. ಬಿಜೆಪಿಗೆ ಮತ ಹಾಕಿದ್ರೆ ಶಾಂತಿಯುತ ಜೀವನ ಸಾಗಿಸಬಹುದು.ಇಲ್ಲವಾದಲ್ಲಿ ಕಷ್ಟ ಅನುಭವಿಸುತ್ತೀರಿ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಬಿಜೆಪಿ ಮುಖಂಡ ರಂಜಿತ್ ಕುಮಾರ್ ಶ್ರೀವಾಸ್ತವ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments