Publish Date: Tue, 18 Apr 2023 (19:30 IST)
Updated Date: Tue, 18 Apr 2023 (19:25 IST)
ಬೆಂಬಲಿಗರಿಗೆ ಟಿಕೆಟ್ ಕೊಡಿಸಲು ಮಾಜಿ ಸಿಎಂ ಸಿದ್ದರಾಮಯ್ಯ ಕಸರತ್ತು ನಡೆಸಿದ್ದಾರೆ. ಅಖಂಡ ಶ್ರೀನಿವಾಸಮೂರ್ತಿ, ರಾಮಪ್ಪಗೆ ಟಿಕೆಟ್ ನೀಡುವಂತೆ ಸಿದ್ದರಾಮಯ್ಯ ಮಲ್ಲಿಕಾರ್ಜುನ ಖರ್ಗೆಗೆ ಒತ್ತಡ ಹೇರಿದ್ದಾರೆ. ಈ ಕುರಿತು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಪುಲಕೇಶಿನಗರ ಕ್ಷೇತ್ರದಿಂದ ಅಖಂಡ ಶ್ರೀನಿವಾಸಮೂರ್ತಿ ಹಾಗೂ ಹರಿಹರ ಕ್ಷೇತ್ರದಿಂದ ರಾಮಪ್ಪಗೆ ಟಿಕೆಟ್ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಹೀಗಾಗಲೇ ಅಖಂಡ ಶ್ರೀನಿವಾಸ್ ಜೊತೆ ಮಾತುಕತೆ ನಡೆಸಿರುವ ಸಿದ್ದರಾಮಯ್ಯ ಒಂದು ದಿನ ಕಾದು ನೋಡುವಂತೆ ತಿಳಿಸಿದ್ದಾರೆ.