Webdunia - Bharat's app for daily news and videos

Install App

ಸಿದ್ದರಾಮಯ್ಯ ಸೂಚಿಸಿದ್ರೆ ಜಮಖಂಡಿಗೆ ಹೋಗಿ ಪ್ರಚಾರ ಮಾಡುವೆ: ಕಾಂಗ್ರೆಸ್ ತೀರ್ಮಾನವೇ ಅಂತಿಮ ಎಂದ ದೇವೇಗೌಡರು

Webdunia
ಮಂಗಳವಾರ, 30 ಅಕ್ಟೋಬರ್ 2018 (11:00 IST)
ಬಳ್ಳಾರಿ: ದೇಶದಲ್ಲಿ ಜಾತ್ಯಾತೀತ ವ್ಯವಸ್ಥೆ ಒಗ್ಗೂಡಬೇಕಿರುವುದರಿಂದ ಕಾಂಗ್ರೆಸ್ ಜತೆ ಸೇರಿ ಪ್ರಾದೇಶಿಕ ಪಕ್ಷಗಳು ಚುನಾವಣೆ ಎದುರಿಸಬೇಕಿದೆ. ಹೀಗಾಗಿ ಕಾಂಗ್ರೆಸ್ ಜತೆ ಸೇರಿ ಪ್ರಚಾರ ಮಾಡುತ್ತಿದ್ದೇವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರು ಬಳ್ಳಾರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಸಿದ್ದರಾಮಯ್ಯ ಸೂಚಿಸಿದರೆ ಜಮಖಂಡಿಗೆ ಹೋಗಿ ಪ್ರಚಾರ ಮಾಡುವೆ. ಜಾತ್ಯಾತೀತ ವ್ಯವಸ್ಥೆ ಉಳಿಯಬೇಕಿದ್ದರೆ ಕಾಂಗ್ರೆಸ್ ಜತೆ ಹೋಗುವುದು ಅನಿವಾರ್ಯ. ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ತೀರ್ಮಾನವೇ ಅಂತಿಮ ಎಂದು ದೇವೇಗೌಡರು ಹೇಳಿದ್ದಾರೆ.

ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೂಚಿಸಿದ್ದಕ್ಕೆ ಎಚ್ ಡಿಕೆ ಸಿಎಂ ಆದರು. ಮುಂದೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜತೆ ಕೈ ಜೋಡಿಸುತ್ತೇವೆ. ಒಂದು ವೇಳೆ ರಾಹುಲ್ ಪ್ರಧಾನಿಯಾಗುತ್ತಾರೆ ಎಂದಾದರೆ ಅದಕ್ಕೆ ನಮ್ಮ ಸಹಮತವಿದೆ ಎಂದೂ ಗೌಡರು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments