Webdunia - Bharat's app for daily news and videos

Install App

ಕಾರ್ಯಕರ್ತರು ಹೇಳಿದ್ರೆ ರಾಜೀನಾಮೆಗೆ ಸಿದ್ಧ: ಸಚಿವ ಪರಮೇಶ್ವರ್ ಮಾತಿನ ಮರ್ಮವೇನು

Sampriya
ಭಾನುವಾರ, 23 ಫೆಬ್ರವರಿ 2025 (12:26 IST)
ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಒಳಜಗಳ ಜೋರಾಗಿರುವ ಬೆನ್ನಲ್ಲೇ ಗೃಹ ಸಚಿವ ಪರಮೇಶ್ವರ್‌ ಅವರು ರಾಜೀನಾಮೆ ಬಗ್ಗೆ ಮಾತನಾಡಿದ್ದಾರೆ.

ಮುಖ್ಯಮಂತ್ರಿ ಹುದ್ದೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ರಾಜ್ಯದಲ್ಲಿ ಜೋರಾಗಿದೆ. ಅದರ ಮಧ್ಯೆ ಸಚಿವ ಪರಮೇಶ್ವರ್‌ ಅವರು ಕಾಂಗ್ರೆಸ್‌ ಕಾರ್ಯಕರ್ತರ ಮಧ್ಯೆ ರಾಜೀನಾಮೆಯ ಮಾತು ಆಡಿದ್ದು, ಇದು ಕಾರ್ಯಕರ್ತರಲ್ಲಿ ಗೊಂದಲ ಮೂಡಿಸಿದೆ.

ಕಾರ್ಯಕರ್ತರ ಮನದಾಳಕ್ಕೆ ಸ್ಪಂದಿಸಲು ಆಗದ್ದಕ್ಕೆ ಬೇಸರ ಹೊರಹಾಕಿರುವ ಪರಮೇಶ್ವರ್‌ ಅವರು ತುಮಕೂರಿನ ಕೊರಟಗೆರೆಯ ರಾಜೀವ್‌ ಭವನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ರಾಜೀನಾಮೆ ನೀಡುವ ಎಚ್ಚರಿಕೆ ನೀಡಿದ್ದಾರೆ.

ಕಾರ್ಯಕರ್ತರೊಂದಿಗೆ ಮಾತನಾಡುತ್ತಾ, ನಾನು ನಿಮ್ಮ ಕೈಗೆ ಸಿಗೋದಿಲ್ಲ ಎಂದು ನಿಮಗೆಲ್ಲ ನಿರಾಸೆಯಾಗಿರಬಹುದು. ಪಂಚಾಯಿತಿಗೆ ಬರೋದಿಲ್ಲ, ನಮನ್ನ ಮಾತಾಡಿಸೋದಿಲ್ಲ ಎಂದು ನಿಮಗೆ ಅನಿಸಬಹುದು. ಆದರೆ, ಸಮಯ ನನ್ನ ಕೈಯಲ್ಲಿ ಇಲ್ಲ. ನೀವೆಲ್ಲಾ ದೊಡ್ಡ ಮನುಸ್ಸು ಮಾಡಿ ಒಂದೇ ಮಾತಲ್ಲಿ ಹೇಳಿಬಿಟ್ರೆ ನಾಳೇನೆ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದರು.

ಆಗ ವಿಚಲಿತಗೊಂಡ ಕಾರ್ಯಕರ್ತರು ರಾಜೀನಾಮೆ ಕೊಡಬೇಡಿ ಎಂದು ಹೇಳಿ, ಸಚಿವರಿಗೆ ಧೈರ್ಯ ತುಂಬಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ನಾವೆಲ್ಲಾ ಇರ್ತೀವಿ, ಹೋಗ್ತೀವಿ ದೇಶದ ಭದ್ರತೆ ಎಲ್ಲಕ್ಕಿಂತ ಮುಖ್ಯ: ಮಲ್ಲಿಕಾರ್ಜುನ ಖರ್ಗೆ

Indian Navy: ನಾವು ರೆಡಿ ಎಂದು ಕ್ಷಿಪಿಣಿ ಹಾರಿಸಿ ಪಾಕಿಸ್ತಾನಕ್ಕೆ ಠಕ್ಕರ್ ಕೊಟ್ಟ ಭಾರತೀಯ ನೌಕಾ ಸೇನೆ

ಸಿದ್ದರಾಮಯ್ಯನವರ ಅಲ್ಪ ಸಂಖ್ಯಾತರ ಮೇಲಿನ ಪ್ರೀತಿ ಗೊತ್ತು ಬಿಡಿ: ಬಿವೈ ವಿಜಯೇಂದ್ರ

ಬಾಂಬ್ ಸುಮ್ನೇ ಇಟ್ಕೊಂಡಿಲ್ಲ, ನೀರು ಕೊಡದಿದ್ರೆ ಪರಮಾಣು ಬಾಂಬ್ ಹಾಕ್ತೀವಿ: ಭಾರತಕ್ಕೆ ಎಚ್ಚರಿಕೆ ನೀಡಿದ ಪಾಕಿಸ್ತಾನ

ಪಾಕಿಸ್ತಾನ ಜೊತೆ ಯುದ್ಧ ಬೇಡ ಅಂತ ಹೇಳಿಲ್ಲ: ವಿವಾದವಾಗುತ್ತಿದ್ದಂತೇ ಉಲ್ಟಾ ಹೊಡೆದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments