Publish Date: Fri, 10 Aug 2018 (12:58 IST)
Updated Date: Fri, 10 Aug 2018 (13:07 IST)
ಲೋಕಸಭಾ ಹಾಗೂ ಸ್ಥಳೀಯ ಚುನಾವಣೆ ಹಿನ್ನಲೆಯಲ್ಲಿ ರಾಷ್ಟ್ರೀಯ ಪಕ್ಷಗಳ ರಣಕಹಳೆ ಜೋರಾಗಿದೆ. ಗಡಿನಾಡಿನಿಂದ ಬಿಜೆಪಿ ರಾಜ್ಯಾಧ್ಯಕ್ಷರ ಪ್ರವಾಸದ ಬೆನ್ನಲ್ಲೇ ಈಗ ಕಾಂಗ್ರೆಸ್ ಅಧ್ಯಕ್ಷ ಭೇಟಿ ನೀಡಿದ್ದಾರೆ.
ಗಡಿನಾಡು ಬೀದರನಿಂದಲೆ ರಣಕಹಳೆ ಮೊಳಗಿಸಲು ರಾಷ್ಟ್ರೀಯ ಪಕ್ಷಗಳು ಮುಂದಾಗಿವೆ.
ಲೋಕಸಭಾ ಹಾಗೂ ಸ್ಥಳೀಯ ಚುನಾವಣೆಗೆ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ರಾಜ್ಯ ಪ್ರವಾಸ ನಡೆಸುತ್ತಿರುವ ಬೆನ್ನಲ್ಲೆ ಈಗ ಕೋಟೆ ನಗರಿ ಬೀದರ್ ಗೆ ಕಾಂಗ್ರೆಸ್ ರಾಜ್ಯ ಅಧ್ಯಕ್ಷ ದಿನೇಶ್ ಗುಂಡೂರಾವ್ ಭೇಟಿ ನೀಡಿದ್ದಾರೆ. ನಗರದ ರಾಘವೇಂದ್ರ ದೇವಸ್ಥಾನಕ್ಕೆ ಭೇಟಿ ನೀಡಿ ಸ್ವಾಮಿ ದರ್ಶನ ಮಾಡಿದರು.
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಇದೇ ತಿಂಗಳ 13 ರಂದು ಬೀದರ್ ಗೆ ಆಗಮಿಸಲಿದ್ದಾರೆ. ಲೋಕಸಭೆ ಹಾಗೂ ಸ್ಥಳೀಯ ಚುನಾವಣೆ ಹಿನ್ನಲೆ ಬೀದರನಿಂದ ರಾಹುಲ್ ಗಾಂಧಿ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ಹೀಗಾಗಿ ಬೀದರ ನಗರಕ್ಕೆ ಭೇಟಿ ನೀಡಿರುವ ಕೆಪಿಸಿಸಿ ರಾಜ್ಯ ಅದ್ಯಕ್ಷ ದಿನೇಶ್ ಗುಂಡುರಾವ್, ನೆಹರು ಕ್ರೀಡಾಂಗಣದಲ್ಲಿ ವೇದಿಕೆ ಪೂರ್ವಭಾವಿ ತಯಾರಿ ವೀಕ್ಷಣೆ ಮಾಡಿದರು.