Webdunia - Bharat's app for daily news and videos

Install App

ರಿಯಲ್ ಎಸ್ಟೇಟ್ ಉದ್ಯಮಿ ಸಂತೋಷ ಹತ್ಯೆ ಪ್ರಕರಣ, ಪತ್ನಿ ಸೇರಿ ಮೂವರು ಅರೆಸ್ಟ್‌

Sampriya
ಗುರುವಾರ, 17 ಅಕ್ಟೋಬರ್ 2024 (19:26 IST)
ಬೆಳಗಾವಿ: ಇಲ್ಲಿನ ರಿಯಲ್‌ ಎಸ್ಟೇಟ್‌ ಉದ್ಯಮಿ ಸಂತೋಷ ದುಂಡಪ್ಪ ಪದ್ಮಣ್ಣವರ (47) ಹತ್ಯೆ ಪ್ರಕರಣ ಸಂಬಂಧ ಮಗಳು ನೀಡಿದ ದೂರಿನಂತೆ ಪೊಲೀಸರು ಪತ್ನಿ ಹಾಗೂ ಮೂವರನ್ನು ವಶಕ್ಕೆ ಪಡೆದು, ತನಿಖೆ ನಡೆಸುತ್ತಿದ್ದಾರೆ. ಇನ್ನಿಬ್ಬರಿಗಾಗಿ ಶೋಧ ನಡೆಸಿದ್ದಾರೆ.

ಮುಖ್ಯ ಆರೋಪಿ, ಉದ್ಯಮಿಯ ಪತ್ನಿ ಉಮಾ (41), ಇವರ ಫೇಸ್‌ಬುಕ್‌ ಸ್ನೇಹಿತ, ಕೊಡಗು ಜಿಲ್ಲೆಯ ಶನಿವಾರಸಂತೆ ಗ್ರಾಮದ ಶೋಭಿತ್‌ ಗೌಡ (30) ಹಾಗೂ ಪವನ್‌ (27) ಪೊಲೀಸರ ವಶಕ್ಕೆ ಸಿಕ್ಕಿದ್ದಾರೆ. ಮನೆಗೆಲಸದವರಾದ ನಂದಾ ಕುರಿಯಾ, ಪ್ರಕಾಶ ಕುರಿಯಾ ತಲೆಮರೆಸಿಕೊಂಡಿದ್ದಾರೆ.

ಇನ್ನೂ ತಂದೆಯ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಮಗಳು ಸಂಜನಾ ಠಾಣೆಯಲ್ಲಿ ತನ್ನ ತಾಯಿ ಸೇರಿದಂತೆ ನಾಲ್ವರ ವಿರುದ್ಧ ದೂರು ನೀಡಿದ್ದರು.  ಅ.10ರಂದು ಹೂಳಲಾಗಿದ್ದ ಸಂತೋಷ ಅವರ ಶವವನ್ನು ಬುಧವಾರ ಹೊರತೆಗೆದು ತನಿಖೆ ಕೈಗೊಳ್ಳಲಾಗಿದೆ.

 ಡಿಸಿಪಿ ನಿರಂಜನರಾಜೇ ಅರಸ್‌  ಪ್ರತಿಕ್ರಿಯಸಿ, ಸಂಶಯಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಗಿದೆ. ಸಂತೋಷ ಅವರ ಮರಣೋತ್ತರ ಪರೀಕ್ಷೆಯ ವರದಿ ಇನ್ನೂ ಕೈ ಸೇರಿಲ್ಲ. ಅದು ಬಂದ ನಂತರ ಪ್ರಕರಣದ ಸ್ಪಷ್ಟ ರೂಪ ತಿಳಿಯಲಿದೆ ಎಂದುತಿಳಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments