ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಸೈಟ್ ಕೊಡಿಸುವುದಾಗಿ 500 ಕೋಟಿ ವಂಚನೆ!

Webdunia
ಗುರುವಾರ, 29 ಜುಲೈ 2021 (17:24 IST)
ರಾಜಾಜಿನಗರದ ಮೂರನೇ ಹಂತದ ಬೃಂದಾವನ ಪ್ರಾಪರ್ಟಿಸ್ 5ರಿಂದ 6 ಲಕ್ಷ ರೂ.ಗಳಿಗೆ ನಗರದ ಹೊರವಲಯದಲ್ಲಿ ಸೈಟ್ ಕೊಡಿಸುವುದಾಗಿ ತಾವರೆಕರೆ, ಹೆಸರಘಟ್ಟ, ನೆಲಮಂಗಲ ಕಡೆ ನಿವೇಶನ ತೋರಿಸಿ ನೂರಾರು ಜನರಿಗೆ ವಂಚನೆ ಮಾಡಿದೆ ಎಂಬ ಆರೋಪ ಕೇಳಿ ಬಂದಿದೆ.
ದಿನೇಶ್ ಗೌಡ ಒಡೆತನದ ಬೃಂದಾವನ್ ಪ್ರಾಪರ್ಟಿಸ್ ಕಂಪನಿ ಕಳೆದ ಐದು ವರ್ಷಗಳಿಂದ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿತ್ತು. ಇದೀಗ ಕಂಪನಿಯನ್ನು ಮುಚ್ಚಿ ಮಾಲೀಕರು ಪರಾರಿಯಾಗಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಹಣ ಹೂಡಿಕೆ ಮಾಡಿದ ಸಾರ್ವಜನಿಕರು ಬೃಂದಾವನ ಪ್ರಾಟರ್ಟಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದು, ಹಣ ವಾಪಸ್ ಕೊಡಿಸುವಂತೆ ಆಗ್ರಹಿಸಿದ್ದಾರೆ. ಕಂಪನಿಯಲ್ಲಿ ಕ್ಯಾಬ್ ಚಾಲಕರು, ಪ್ಲಂಬರ್, ಹೋಟೆಲ್ ಸಪ್ಲೈಯರ್ ಗಳು ಹಣ ಹೂಡಿಕೆ ಮಾಡಿದ್ದಾರೆ.
ಸ್ಥಳಕ್ಕೆ ರಾಜಾಜಿನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ವಂಚನೆ ಬಗ್ಗೆ ದೂರು ನೀಡುವಂತೆ ಪೊಲೀಸರಿಂದ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಡಿಪಾರು ಆದೇಶದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿಗೆ ಬಿಗ್ ಶಾಕ್

ರಾಮಮಂದಿರ ದೇಣಿಗೆ ದುರುಪಯೋಗ: ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಖಲಿಸ್ತಾನ್ ಗುಂಪಿನಿಂದ ಕೊಲೆ ಬೆದರಿಕೆ: ಭದ್ರತೆಯಲ್ಲಿ ಮಹತ್ವದ ಬದಲಾವಣೆ

ಮಕ್ಕಳಾಗಿಲ್ಲವೆಂದು ಸೊಸೆಯೊಬ್ಬಳನ್ನು ಈ ರೀತಿ ನಡೆಸಿಕೊಳ್ಳುವುದಾ, ಹೀನಾಯ ಘಟನೆ, Video

ಡಿಕೆ ಶಿವಕುಮಾರ್ ಇಡೀ ರಾಜ್ಯದ ಸಿಎಂ, ಅದು ಮರೆಯಬಾರದು: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments