Webdunia - Bharat's app for daily news and videos

Install App

ರಿಯಾಲಿಟಿ ಶೋ ಸ್ಟಾರ್ ತಾಪಸ್ಯ ರಜತ್ ರಿಂದ ಅಂಗಡಿಯಲ್ಲಿ ರಂಪಾಟ

Webdunia
ಸೋಮವಾರ, 1 ಮಾರ್ಚ್ 2021 (09:38 IST)
ಬೆಂಗಳೂರು: ಕನ್ನಡ ಕಿರುತೆರೆಯ ರಿಯಾಲಿಟಿ ಶೋ ಮೂಲಕ ಜನಪ್ರಿಯರಾಗಿದ್ದ ರಜತ್ ಕಿಶನ್ ಪಾರ್ಕಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಅಂಗಡಿಯೊಂದರ ಮಾಲಿಕರ ಜೊತೆ ಕಿತ್ತಾಟ ನಡೆಸಿದ ಘಟನೆ ವರದಿಯಾಗಿದೆ.


ಈ ಸಂಬಂಧ ಬಸವೇಶ್ವರ ನಗರದ ಅಂಗಡಿ ಮಾಲಿಕ ಕಿರಣ್ ರಾಜ್ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ. ರಜತ್ ತಮ್ಮ ಅಂಗಡಿ ಮುಂದೆಯೇ ಕಾರು ಪಾರ್ಕ್ ಮಾಡಿದ್ದರು. ಇದರಿಂದ ತಮಗೆ ವ್ಯಾಪಾರಕ್ಕೆ ತೊಂದರೆಯಾಗುತ್ತದೆಂದು ಬೇರೆಡೆ ಪಾರ್ಕ್ ಮಾಡುವಂತೆ ಕಿರಣ್ ಹೇಳಿದ್ದಾರೆ. ಈ ವೇಳೆ ಐದು ನಿಮಿಷದಲ್ಲಿ ಕಾರು ತೆಗೆಯವುದಾಗಿ ಹೇಳಿದ ರಜತ್ ಅರ್ಧಗಂಟೆಯಾದರೂ ತೆಗೆಯಲಿಲ್ಲ. ಆಗ ಮತ್ತೆ ಕಿರಣ್ ಕಾರು ತೆಗೆಯಲು ಹೇಳಿದ್ದಾರೆ. ಆಗ ಆಕ್ರೋಶಗೊಂಡ ರಜತ್ ರಂಪಾಟ ನಡೆಸಿದ್ದಾರೆ. ಅಂಗಡಿಯ ವಸ್ತುಗಳಿಗೆ ಹಾನಿ ಮಾಡಿದ್ದಲ್ಲದೆ, ಮಾಲಿಕ ಕಿರಣ್, ಆತನ ಸಹಾಯಕ್ಕೆ ಬಂದ ಪೋಷಕರ ಮೇಲೂ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ. ಇದೀಗ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments