Webdunia - Bharat's app for daily news and videos

Install App

ಬಿಜೆಪಿ ಮೇಲೆ ಎಚ್ ಡಿ ಕುಮಾರಸ್ವಾಮಿ ಮುನಿಸಿಗೆ ಅಸಲಿ ಕಾರಣವೇನು

Krishnaveni K
ಗುರುವಾರ, 1 ಆಗಸ್ಟ್ 2024 (10:39 IST)
ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಮುಡಾ ಹಗರಣ ವಿಚಾರವಾಗಿ ಪಾದಯಾತ್ರೆ ಹಮ್ಮಿಕೊಳ್ಳಲು ಹೊರಟಿರುವ ರಾಜ್ಯ ಬಿಜೆಪಿಗೆ ಈಗ ತಮ್ಮದೇ ದೋಸ್ತಿಗಳ ಕೋಪಕ್ಕೆ ಗುರಿಯಾಗಿದೆ. ಇದೀಗ ತಮ್ಮ ಮನೆ ತೂತು ಸರಿಮಾಡುವ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಬಿ ವೈ ವಿಜಯೇಂದ್ರ ನೇತೃತ್ವದಲ್ಲಿ ನಡೆಯಬೇಕಿದ್ದ ಪಾದ ಯಾತ್ರೆಗೆ ಜೆಡಿಎಸ್ ಬೆಂಬಲವಿಲ್ಲ. ತನ್ನ ಪ್ರಾಬಲ್ಯವಿರುವ ಕ್ಷೇತ್ರದಲ್ಲಿ ಪಾದಯಾತ್ರೆ, ಸಮಾವೇಶ ಹಮ್ಮಿಕೊಳ್ಳುವಾಗ ತಮ್ಮ ಪಕ್ಷದವರನ್ನೇ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎನ್ನುವುದು ಜೆಡಿಎಸ್ ಅಸಮಾಧಾನಕ್ಕೆ ಕಾರಣವಾಗಿದೆ.

ಅದರಲ್ಲೂ ದೇವೇಗೌಡರ ಕುಟುಂಬದ ಬದ್ಧ ಎದುರಾಳಿ ಪ್ರೀತಂ ಗೌಡ ಅವರನ್ನು ಪಾದಯಾತ್ರೆ ಸಭೆಗೆ ಕರೆದಿರುವುದು ಎಚ್ ಡಿ ಕುಮಾರಸ್ವಾಮಿ ಆಕ್ರೋಶಕ್ಕೆ ಕಾರಣವಾಗಿದೆ. ದೇವೇಗೌಡರ ಕುಟುಂಬಕ್ಕೆ ವಿಷ ಇಟ್ಟವರ ಜೊತೆ ನಾವು ವೇದಿಕೆ ಹಂಚಿಕೊಳ್ಳಬೇಕಾ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವಿಚಾರವಾಗಿ ಬಿಜೆಪಿ ನಾಯಕರ ಮೇಲೆ ಕುಮಾರಸ್ವಾಮಿ ಬಹಿರಂಗವಾಗಿಯೇ ಕಿಡಿ ಕಾರಿದ್ದಾರೆ. ಚುನಾವಣಾ ಮೈತ್ರಿಯೇ ಬೇರೆ, ರಾಜಕೀಯವೇ ಬೇರೆ ಎಂದಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ವಿರುದ್ಧ ತಂತ್ರ ಹೆಣೆಯಲು ಮುಂದಾದ ಬಿಜೆಪಿಗೆ ಈಗ ರಾಜ್ಯದಲ್ಲಿ ದೋಸ್ತಿ ಪಕ್ಷದ ಜೆಡಿಎಸ್ ಜೊತೆಗಿನ ಮೈತ್ರಿಯನ್ನೇ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಈ ಎಲ್ಲಾ ಬೆಳವಣಿಗೆ ಹಿನ್ನಲೆಯಲ್ಲಿ ವಿಜಯೇಂದ್ರ ದೆಹಲಿಯಲ್ಲಿ ಅಮಿತ್ ಶಾರನ್ನು ಭೇಟಿ ಮಾಡಿ ಪರಿಸ್ಥಿತಿ ಬಗ್ಗೆ ವಿವರಣೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments