ಕರ್ನಾಟಕದಲ್ಲಿ ದಾಖಲೆಯ ಮಳೆ

Webdunia
ಮಂಗಳವಾರ, 12 ಜುಲೈ 2022 (16:50 IST)
ರಾಜ್ಯದ ಮಲೆನಾಡು, ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಸೋಮವಾರವೂ ಮಳೆ ಮುಂದುವರಿದಿದ್ದರೆ, ಕರಾವಳಿ ಜಿಲ್ಲೆಗಳಲ್ಲಿ ತುಸು ಕಡಿಮೆಯಾಗಿದೆ. ಆದರೆ, ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡ್ಡ ಕುಸಿದಿದ್ದು, ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಕಾರು ಚಿಕ್ಕಮಗಳೂರು ಜಿಲ್ಲೆಯ ಗೌರಿ ಹೊಳೆಗೆ ಉರುಳಿ ಚಾಲಕ ಸೇರಿ ಇಬ್ಬರು ನಾಪತ್ತೆ ಆಗಿದ್ದಾರೆ. ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ 24 ಮನೆಗಳು ಭಾಗಶಃ ಕುಸಿದಿದ್ದರೆ, ಗಡಿ ಜಿಲ್ಲೆ ಬೀದರ್‌ನಲ್ಲಿ 12 ಮನೆಗಳು ಕುಸಿದಿವೆ.
 
ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕಿನ ಕಲ್ಮಕ್ಕಿ ಬಳಿ ನೀರೋಡಿ ಹೊಳೆಗೆ ಅಡ್ಡಲಾಗಿ ಕಟ್ಟಲಾಗಿರುವ ಸೇತುವೆಯ ಮೇಲ್ಭಾಗ ಸಂಪೂರ್ಣ ಕೊಚ್ಚಿ ಹೋಗಿದೆ. ಸೇತುವೆಯು ಕುಸಿಯುವ ಭೀತಿ ಎದುರಾಗಿದ್ದು, ರಸ್ತೆ ಸಂಪರ್ಕ ಕಡಿದುಹೋಗಿದೆ. ಬಂಟ್ವಾಳ ತಾಲ್ಲೂಕಿನ ಸೂರಿಕುಮೇರು ಬಳಿಯೂ ಗುಡ್ಡ ಕುಸಿದಿದ್ದು, ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಯಿತು.
 
ಚಿಕ್ಕಮಗಳೂರು ಜಿಲ್ಲೆಯಲ್ಲಿ ಅರೆನೂರು ಮತ್ತು ಸದಾಶಿವಗಡ ಬಳಿ ಗುಡ್ಡ ಕುಸಿದಿದೆ. ಇದರಿಂದಾಗಿ ಸದಾಶಿವಗಡ-ಬೆಳಗಾವಿ ಸಂಪರ್ಕ ಕಡಿತವಾಗಿದೆ. ಇತ್ತ, ಹಾಸನ ಜಿಲ್ಲೆಯಲ್ಲಿ ದ್ವಾರಸಮುದ್ರ ಕೆರೆಯು ಕೋಡಿ ಬಿದ್ದಿದ್ದು, ಕೊಣನೂರು-ರಾಮನಾಥಪುರ ನಡುವಿನ ಸಂಪರ್ಕ ಬಂದ್‌ ಆಗಿತ್ತು. ಸಕಲೇಶಪುರ ತಾಲ್ಲೂಕು ದೋಣಿಗಲ್‌ ಬಳಿ ಸೋಮವಾರವೂ ಹೆದ್ದಾರಿ ಬದಿ ಭೂಕುಸಿತವಾಗಿದ್ದು, ಸಂಚಾರ ಸ್ಥಗಿತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಗೆ ತಲೆಗೆ ಪೇಟ ಕಟ್ಟಿದ ಸಿದ್ದರಾಮಯ್ಯ Video

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಕಾಶ್ಮೀರದಲ್ಲಿ ಹಿಮಪಾತ, ವಿಮಾನ ಹಾರಾಟದಲ್ಲಿ ಭಾರೀ ವ್ಯತ್ಯಯ

ಅಬಕಾರಿ ಇಲಾಖೆಯಲ್ಲಿ ಕಮಿಷನ್ ಸಂಗ್ರಹಿಸಲು ಹೇಳಿದವರೇ ರಾಹುಲ್ ಗಾಂಧಿ: ಆರ್ ಅಶೋಕ್ ಆರೋಪ

ಮುಂದಿನ ಸುದ್ದಿ
Show comments