Webdunia - Bharat's app for daily news and videos

Install App

ಆರೆಂಜ್ ನಿಂದ ಈಗ ರೆಡ್ ಝೋನ್‍ : ಕೊರೊನಾ ಮತ್ತೆ 7 ಪಾಸಿಟಿವ್

Webdunia
ಶುಕ್ರವಾರ, 17 ಏಪ್ರಿಲ್ 2020 (14:55 IST)
ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳದಿಂದಾಗಿ ಆರೆಂಜ್ ಝೋನ್ ನಲ್ಲಿದ್ದ ಈ ಜಿಲ್ಲೆ ಇದೀಗ ರೆಡ್ ಝೋನ್ ಗೆ ಬಂದಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಈ ವರೆಗೆ ಕೊರೊನಾ ಸೋಂಕಿತರ ಸಂಖ್ಯೆ ಆರರಿಂದ ಮೇಲಕ್ಕೇರದೆ ಆರೆಂಜ್ ಝೋನ್‍ನಲ್ಲಿದ್ದ ಗಣಿ ನಾಡು ಒಂದೇ ಕುಟುಂಬದ ಏಳು ಜನರಲ್ಲಿ ಕೊರೋನಾ ಸೋಂಕು ಕಂಡು ಬಂದಿರುವುದರಿಂದ ರೆಡ್ ಜೋನ್‍ಗೆ ತಳ್ಳಲ್ಪಟ್ಟಿದೆ. ಜಿಲ್ಲೆಯ ಹೊಸಪೇಟೆ ನಗರದ ಒಂದೇ ಕಟುಂಬದ ಏಳು ಜನರಲ್ಲಿ ಈ ಸೋಂಕು ಕಂಡು ಬಂದಿರುವುದರಿಂದ ಈಗ ಹೊಸಪೇಟೆ ನಗರ ಹಾಟ್ ಸ್ಪಾಟ್ ಆಗಿ ಮಾರ್ಪಟ್ಟಿದೆ.

ಮಾರ್ಚ್ 5 ರಿಂದ 16 ವರೆಗೆ 11 ದಿನಗಳ ಕಾಲ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗದಿದ್ದರಿಂದ ಜಿಲ್ಲೆಯ ಜನತೆ ನಿಟ್ಟುಸಿರು ಬಿಟ್ಟಿದ್ದರು.  ಲಾಕ್‍ಡೌನ್ ಸಮಯದಲ್ಲಿ ಜನತೆ ಆದಷ್ಟು ಮನೆಯಲ್ಲಿದ್ದು, ಸಾಮಾಜಿಕ ಅಂತರ ಕಾಯ್ದುಕೊಂಡು ಸೋಂಕು ಹರಡಂದಂತೆ ಇದ್ದುದರಿಂದ ಜಿಲ್ಲೆ ಆರೇಂಜ್ ಝೋನ್ ನಲ್ಲಿತ್ತು.

ಈಗ 14 ದಿನಗಳ ನಂತರ ಮೊದಲ ಬಾರಿಗೆ ಪಾಸಿಟಿವ್ ಕಾಣಿಸಿಕೊಂಡ ರೋಗಿ 52 ವರ್ಷದ ಗಂಡ ಮತ್ತು 48 ವರ್ಷದ ಹೆಂಡತಿ (ಪಿ-89 ಮತ್ತು 90) ಅವರ ಸಂಪರ್ಕಕ್ಕೆ ಬಂದಿದ ಸಂಬಂಧಿಕರ ಏಳು ಜನರಲ್ಲಿ ಕೊರೋನಾ ಪಾಸಿಟಿವ್  ಕಂಡು ಬಂದಿದೆ.

ಈಗ ಪಿ-90 ಅವರ 68 ವರ್ಷದ ತಾಯಿ,  50 ವರ್ಷದ ಅಣ್ಣ, 47 ವರ್ಷದ ತಂಗಿ, 39 ವರ್ಷದ ತಮ್ಮ, 11 ವರ್ಷದ ತಂಗಿಯ ಮಗಳು, ಮತ್ತೊಬ್ಬ ಸಹೋದರಿ ಮತ್ತು ಆಕೆಯ ಪತಿ ಅವರಿಗೆ ಈ ಸೋಂಕು ಕಾಣಿಸಿಕೊಂಡಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments