Webdunia - Bharat's app for daily news and videos

Install App

ಕರ್ನಾಟಕದಲ್ಲಿ ತಗ್ಗಿದ ಮಳೆ; ರಾಜಸ್ಥಾನ, ದೆಹಲಿ, ತಮಿಳುನಾಡಿನಲ್ಲಿ ಹಳದಿ ಅಲರ್ಟ್ ಘೋಷಣೆ

Webdunia
ಗುರುವಾರ, 20 ಜನವರಿ 2022 (19:28 IST)
ಇಂದಿನಿಂದ ಜ. 21ರವರೆಗೆ ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಪೂರ್ವ ರಾಜಸ್ಥಾನ ಮತ್ತು ಪಶ್ಚಿಮ ಮಧ್ಯಪ್ರದೇಶದಲ್ಲಿ ಶುಕ್ರವಾರದವರೆಗೆ ಹಳದಿ ಅಲರ್ಟ್​ ಘೋಷಿಸಲಾಗಿದೆ.
ಬೆಂಗಳೂರು: ಮಲೆನಾಡಿನ ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು ಸೇರಿದಂತೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಸೋಮವಾರ ಹಗುರ ಮಳೆಯಾಗಿದೆ.
ಇಂದಿನಿಂದ ರಾಜ್ಯದಲ್ಲಿ ಮಳೆ ಕಡಿಮೆಯಾಗುವ ಸಾಧ್ಯತೆಯಿದೆ. ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿದ್ದರೂ ಲಡಾಖ್, ಜಮ್ಮು ಮತ್ತು ಕಾಶ್ಮೀರ, ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದಲ್ಲಿ ಹಿಮ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನೆರೆಯ ರಾಜ್ಯವಾದ ತಮಿಳುನಾಡಿನಲ್ಲಿ ಕೂಡ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ, ಮಧ್ಯ, ಪೂರ್ವ ಮತ್ತು ಈಶಾನ್ಯ ಭಾರತದ ಕೆಲವು ಭಾಗಗಳಲ್ಲಿ ದಟ್ಟವಾದ ಮಂಜಿನ ಸಾಧ್ಯತೆಯಿದೆ.
ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಈ ಬಾರಿ ಭಾರೀ ಮಳೆಯಾಗಿದೆ. ಇಂದಿನಿಂದ ಜ. 21ರವರೆಗೆ ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಪೂರ್ವ ರಾಜಸ್ಥಾನ ಮತ್ತು ಪಶ್ಚಿಮ ಮಧ್ಯಪ್ರದೇಶದಲ್ಲಿ ಶುಕ್ರವಾರದವರೆಗೆ ಹಳದಿ ಅಲರ್ಟ್​ ಘೋಷಿಸಲಾಗಿದೆ. ಶುಕ್ರವಾರ ಮತ್ತು ಶನಿವಾರದಂದು ಈ ಪ್ರದೇಶದಲ್ಲಿ ಮಿಂಚು ಮತ್ತು ಆಲಿಕಲ್ಲುಗಳೊಂದಿಗೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.
ಇಂದಿನಿಂದ ಗುರುವಾರದವರೆಗೆ ಜಮ್ಮು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಮಳೆಯನ್ನು ನಿರೀಕ್ಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಇಂದಿನಿಂದ ಜನವರಿ 20ರವರೆಗೆ ಜಮ್ಮು ಮತ್ತು ಕಾಶ್ಮೀರ, ಲಡಾಖ್‌ನಲ್ಲಿ ಮಳೆಯನ್ನು ನಿರೀಕ್ಷಿಸಲಾಗಿದೆ. ಇಂದು ರಾಜಸ್ಥಾನ, ಉತ್ತರ ಪ್ರದೇಶ, ಜಮ್ಮು, ಹಿಮಾಚಲ ಪ್ರದೇಶ ಮತ್ತು ಉತ್ತರ ಮಧ್ಯಪ್ರದೇಶದ ಭಾಗಗಳಲ್ಲಿ ದಟ್ಟವಾದ ಮಂಜು ಆವರಿಸುತ್ತದೆ.
ಮುಂದಿನ 24 ಗಂಟೆಗಳಲ್ಲಿ ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಚಳಿ ಗಾಳಿ ಬೀಸಲಿದೆ. ಹಾಗೇ, ಇಂದು ಉತ್ತರ ಪ್ರದೇಶದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದು ಚೆನ್ನೈ, ತಿರುವಳ್ಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರವು ತಿಳಿಸಿದೆ. ಚೆನ್ನೈ, ಚೆಂಗಲ್ಪಟ್ಟು, ರಾಣಿಪೇಟ್, ಕಾಂಚೀಪುರಂ, ವೆಲ್ಲೂರು, ಕಡಲೂರು, ವಿಲ್ಲುಪುರಂ, ತಿರುವರೂರ್, ತಂಜಾವೂರು, ನಾಗಪಟ್ಟಣಂ, ಮೈಲಾಡುತುರೈ ಮತ್ತು ತಮಿಳುನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಇಂದು ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ರಾಜಸ್ಥಾನಗಳಲ್ಲಿ ಶೀತ ಅಲೆಯ ಪರಿಸ್ಥಿತಿ ಇರಬಹುದೆಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments