Webdunia - Bharat's app for daily news and videos

Install App

ಶಾಸಕ ಮಾಲೀಕಯ್ಯ ಗುತ್ತೇದಾರ್ ಅಮಿತ್ ಶಾರವರ ಸಮ್ಮುಖದಲ್ಲಿ ಬಿಜೆಪಿ ಸೇರುತ್ತಾರೆ ಎಂಬುದು ಸುಳ್ಳು ಸುದ್ದಿ - ರಿತೇಶ್ ಗುತ್ತೇದಾರ್

Webdunia
ಶನಿವಾರ, 31 ಮಾರ್ಚ್ 2018 (11:36 IST)
ಕಲಬುರಗಿ : ‘ಕಾಂಗ್ರೆಸ್ ಪಕ್ಷ ತೊರೆಯುವುದಾಗಿ ತಂದೆ ಹೇಳಿಕೆ ನೀಡಿದ್ದಾರೆ. ಆದರೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಸಮ್ಮುಖದಲ್ಲಿ ಬಿಜೆಪಿ ಸೇರುತ್ತಾರೆ ಎಂಬುದು ಸುಳ್ಳು ಸುದ್ದಿ ಎಂದು ಅಫಜಲಪುರ ಶಾಸಕ ಮಾಲೀಕಯ್ಯ ಗುತ್ತೇದಾರ್ ಅವರ ಪುತ್ರ ಫರ್ಹತಾಬಾದ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಿತೇಶ್ ಗುತ್ತೇದಾರ್ ಅವರು ಹೇಳಿದ್ದಾರೆ.

ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡದ ರೀತೇಶ್ ಅವರು,  ಕಾಂಗ್ರೆಸ್‌ ಪಕ್ಷದಲ್ಲಿ ನಮ್ಮ ತಂದೆಯವರಿಗೆ ಅನ್ಯಾಯವಾಗಿದ್ದು ನಿಜ. ರಾಜ್ಯ ಕಾಂಗ್ರೆಸ್‌ನಲ್ಲಿ ಹಿರಿಯ ಶಾಸಕರಾಗಿದ್ದರೂ ಅವರ ಗೌರವಕ್ಕೆ ತಕ್ಕುದಾದ ಸ್ಥಾನಮಾನ ನೀಡುವಲ್ಲಿ ನಾಯಕರು ವಿಫಲವಾಗಿದ್ದಾರೆ.

ಹೀಗಾಗಿ ಪಕ್ಷ ತೊರೆಯುವುದಾಗಿ ತಂದೆ ಹೇಳಿಕೆ ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಜೊತೆಗೂ ಚರ್ಚೆ ಮಾಡಿದ್ದಾರೆ. ಆದರೆ ಮೈಸೂರಿನಲ್ಲಿ ನಡೆಯುವ ಅಮಿತ್‌ ಶಾ ಸಮ್ಮುಖದಲ್ಲಿ ಅವರು ಬಿಜೆಪಿ ಸೇರ್ಪಡೆಗೊಳ್ಳುತ್ತಾರೆ ಎನ್ನುವುದು ಸುಳ್ಳು’ ಎಂದು ಹೇಳಿದ್ದಾರೆ.

ಹಾಗೇ ಮಾಲೀಕಯ್ಯ ಗುತ್ತೇದಾರ್‌ ಅವರು ಶನಿವಾರ ಅಫಜಲ್ಪುರ ತಾಲೂಕಿನ ಸ್ಟೇಷನ್‌ ಗಾಣಗಾಪುರದಲ್ಲಿ ಕಾರ್ಯಕರ್ತರ ಸಭೆ ಕರೆದಿದ್ದು, ಆ ಬಳಿಕ ಮುಂದಿನ ರಾಜಕೀಯ ನಡೆ ಏನೆಂಬುದನ್ನು ತಿಳಿಸಲಿದ್ದಾರೆ ಎಂದು ರಿತೇಶ್ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments