Webdunia - Bharat's app for daily news and videos

Install App

ಧರಣಿ ಹಿಂಪಡೆದ ಕಬ್ಬು ಬೆಳೆಗಾರರು: ಸಚಿವ ಡಿ.ಕೆ.ಶಿವಕುಮಾರ ಹೇಳಿದ್ದೇನು ಗೊತ್ತಾ?

Webdunia
ಶುಕ್ರವಾರ, 23 ನವೆಂಬರ್ 2018 (16:34 IST)
ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದ ರೈತರ ಧರಣಿ ಹಿಂಪಡೆದಿದ್ದಾರೆ. ಸಚಿವ ಡಿ.ಕೆ.ಶಿವಕುಮಾರ ಪ್ರತಿಭಟನೆ ನಿರತರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಬ್ಬಿನ ಬಾಕಿ ಸೇರಿದಂತೆ, ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ  ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಮನವೊಲಿಸಿ ಧರಣಿ ಹಿಂಪಡೆಯುವಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಯಶಸ್ವಿಯಾಗಿದ್ದಾರೆ.

 ಹಲವು ರೈತ ನಾಯಕರಿಗೆ ಎಳನೀರು ಕುಡಿಸಿ, ಧರಣಿಗೆ ತೆರೆ ಎಳೆದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಡಿ.ಕೆ. ಶಿವಕುಮಾರ್, ರೈತರ ಸಮಸ್ಯೆ ಬಗೆಹರಿಸುವುದು ಸರ್ಕಾರದ ಹೊಣೆ. ಆದಷ್ಟು ಬೇಗ ಸಮಸ್ಯೆಗಳನ್ನು ಈಡೇರಿಸಲಾಗುವುದು. ಶೀಘ್ರವೇ ಸಂಬಂಧ ನ್ಯಾಯ ದೊರಕಿಸಿಕೊಡಲಾಗುವುದು. ಹೀಗಾಗಿ ಪ್ರತಿಭಟನೆಯನ್ನು ಹಿಂಪಡೆಯಿರಿ ಎಂದು ಮನವಿ ಮಾಡಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ರೈತ ಮುಖಂಡರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ನಡೆಸಿದ ಸಭೆಯಲ್ಲಿ ಶೀಘ್ರವೇ ಬರಬೇಕಾಗಿರುವ ಬಾಕಿ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ. ನಾನೂ ಕೂಡ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತೇನೆ. ಧರಣಿಯನ್ನು ಹಿಂಪಡೆಯಿರಿ ಎಂದು ಮಾಡಿದ ಮನವಿಗೆ ರೈತರಿಂದ ಸ್ಪಂದನೆ ದೊರೆಯಿತು.
 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments