ಊಟಕ್ಕೆ ಪರದಾಡುತ್ತಿರುವ ನಿರಾಶ್ರಿತರು!

Webdunia
ಮಂಗಳವಾರ, 21 ಆಗಸ್ಟ್ 2018 (16:31 IST)
ಕೇರಳದಲ್ಲಿ ಸುರಿದ ಭಾರೀ ಮಳೆಗೆ ಗಡಿ ಭಾಗದ ಜನರು ತತ್ತರಿಸಿ ಹೋಗಿದ್ದು, ತುತ್ತು ಅನ್ನಕ್ಕಾಗಿ ಗಂಜಿ ಕೇಂದ್ರಗಳಲ್ಲಿ ಪರಿತಪಿಸುವ ಸ್ಥಿತಿ ಎದುರಾಗಿದೆ.

ಕಳೆದ 15 ದಿನಗಳಿಂದ ಕೇರಳ ಮತ್ತು ವೈನಾಡಿನಲ್ಲಿ ಸುರಿದ ಭಾರಿ ಮಳೆಗೆ ಕರ್ನಾಟಕದ ಗಡಿ ಭಾಗವಾದ ಡಿಬಿ ಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡೇ ಗದ್ದೆ, ವಡಕನ ಮಾಳ, ಬೈರನ್ ಕುಪ್ಪೆ, ಆನೆಮಾಳ, ಮುಚ್ಚೂರು ಗ್ರಾಮಗಳು ನೀರಿನಿಂದ ಜಲಾವೃತ್ತಗೊಂಡಿವೆ. ಇನ್ನೂರಕ್ಕೂ ಹೆಚ್ಚು ಮಂದಿ ಬೈರನಕುಪ್ಪೆ ಸರ್ಕಾರಿ ಶಾಲೆಯಲ್ಲಿ ತೆರೆದಿರುವ ಗಂಜಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದಾರೆ.
ಈ ಗಂಜಿ ಕೇಂದ್ರದಲ್ಲಿ ಆಶ್ರಯ ಪಡೆದಿರುವ ಜನರು ಕೇವಲ ಒಂದು ಹೊತ್ತಿನ ಊಟವನ್ನಷ್ಟೇ ಮಾಡುತ್ತಿದ್ದು, ಬಟ್ಟೆ ಮತ್ತು ಕುಡಿಯಲು ನೀರಿಲ್ಲದೆ ಪರದಾಡುತ್ತಿದ್ದಾರೆ. ಹೀಗಾಗಿ ಈ ಗಂಜಿ ಕೇಂದ್ರಕ್ಕೆ ಕೂಡಲೇ ಸರಿಯಾದ ಆಹಾರ, ನಿರಾಶ್ರಿತರಿಗೆ ಬಟ್ಟೆ ಮತ್ತು ಕುಡಿಯಲು ನೀರು ಪೂರೈಸುವಂತೆ ಜನರು ವಿನಂತಿಸಿದ್ದಾರೆ. 

ಇನ್ನೂ ವಿದ್ಯುತ್ ಸಂಪರ್ಕ ಕಡಿತವಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ತಿರುಪತಿಯವರೇ ಕಂಬ ಏರಿ ವಿದ್ಯುತ್ ಸರಿಪಡಿಸಿದ್ದು, ರೆವಿನ್ಯೂ ಇನ್ಸ್ಪೆಕ್ಟರ್ ಆದ ಗೌಸ್ ಅವರು ನಿರಾಶ್ರಿತರ ಮನೆಗಳಿಗೆ ತೆರಳಿ ಅವರ ಬೇಡಿಕೆಗಳನ್ನ ಈಡೇರಿಸಲು ಶ್ರಮಿಸುತ್ತಿದ್ದಾರೆ ಎನ್ನಲಾಗಿದೆ. ಆದರೂ ನಿರಾಶ್ರಿತರಿಗೆ ಹೆಚ್ಚಿನ ಅನುಕೂಲ ಕಲ್ಪಿಸಲು ಆಡಳಿತ ವಿಫಲವಾಗಿದೆ ಎಂಬ ಆರೋಪ ಕೇಳಿಬಂದಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಧನ ದರ ಏರಿಕೆ ವಿರುದ್ಧ ಸಿಡಿದೆದ್ದ ಕಾಂಗ್ರೆಸ್‌: ಜನರ ದುಡ್ಡು ಕಂತುಗಳಲ್ಲಿ ಲೂಟಿ ಎಂದು ಜರಿದ ಖರ್ಗೆ

ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಮಿತಿ ಮೀರಿ ಓಲೈಕೆ ಮಾಡುತ್ತಿದೆ: ವಿಜಯೇಂದ್ರ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಬೆಂಗಳೂರಿಗೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments