Webdunia - Bharat's app for daily news and videos

Install App

ಊಟಕ್ಕೆ ಪರದಾಡುತ್ತಿರುವ ನಿರಾಶ್ರಿತರು!

Webdunia
ಮಂಗಳವಾರ, 21 ಆಗಸ್ಟ್ 2018 (16:31 IST)
ಕೇರಳದಲ್ಲಿ ಸುರಿದ ಭಾರೀ ಮಳೆಗೆ ಗಡಿ ಭಾಗದ ಜನರು ತತ್ತರಿಸಿ ಹೋಗಿದ್ದು, ತುತ್ತು ಅನ್ನಕ್ಕಾಗಿ ಗಂಜಿ ಕೇಂದ್ರಗಳಲ್ಲಿ ಪರಿತಪಿಸುವ ಸ್ಥಿತಿ ಎದುರಾಗಿದೆ.

ಕಳೆದ 15 ದಿನಗಳಿಂದ ಕೇರಳ ಮತ್ತು ವೈನಾಡಿನಲ್ಲಿ ಸುರಿದ ಭಾರಿ ಮಳೆಗೆ ಕರ್ನಾಟಕದ ಗಡಿ ಭಾಗವಾದ ಡಿಬಿ ಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡೇ ಗದ್ದೆ, ವಡಕನ ಮಾಳ, ಬೈರನ್ ಕುಪ್ಪೆ, ಆನೆಮಾಳ, ಮುಚ್ಚೂರು ಗ್ರಾಮಗಳು ನೀರಿನಿಂದ ಜಲಾವೃತ್ತಗೊಂಡಿವೆ. ಇನ್ನೂರಕ್ಕೂ ಹೆಚ್ಚು ಮಂದಿ ಬೈರನಕುಪ್ಪೆ ಸರ್ಕಾರಿ ಶಾಲೆಯಲ್ಲಿ ತೆರೆದಿರುವ ಗಂಜಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದಾರೆ.
ಈ ಗಂಜಿ ಕೇಂದ್ರದಲ್ಲಿ ಆಶ್ರಯ ಪಡೆದಿರುವ ಜನರು ಕೇವಲ ಒಂದು ಹೊತ್ತಿನ ಊಟವನ್ನಷ್ಟೇ ಮಾಡುತ್ತಿದ್ದು, ಬಟ್ಟೆ ಮತ್ತು ಕುಡಿಯಲು ನೀರಿಲ್ಲದೆ ಪರದಾಡುತ್ತಿದ್ದಾರೆ. ಹೀಗಾಗಿ ಈ ಗಂಜಿ ಕೇಂದ್ರಕ್ಕೆ ಕೂಡಲೇ ಸರಿಯಾದ ಆಹಾರ, ನಿರಾಶ್ರಿತರಿಗೆ ಬಟ್ಟೆ ಮತ್ತು ಕುಡಿಯಲು ನೀರು ಪೂರೈಸುವಂತೆ ಜನರು ವಿನಂತಿಸಿದ್ದಾರೆ. 

ಇನ್ನೂ ವಿದ್ಯುತ್ ಸಂಪರ್ಕ ಕಡಿತವಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ತಿರುಪತಿಯವರೇ ಕಂಬ ಏರಿ ವಿದ್ಯುತ್ ಸರಿಪಡಿಸಿದ್ದು, ರೆವಿನ್ಯೂ ಇನ್ಸ್ಪೆಕ್ಟರ್ ಆದ ಗೌಸ್ ಅವರು ನಿರಾಶ್ರಿತರ ಮನೆಗಳಿಗೆ ತೆರಳಿ ಅವರ ಬೇಡಿಕೆಗಳನ್ನ ಈಡೇರಿಸಲು ಶ್ರಮಿಸುತ್ತಿದ್ದಾರೆ ಎನ್ನಲಾಗಿದೆ. ಆದರೂ ನಿರಾಶ್ರಿತರಿಗೆ ಹೆಚ್ಚಿನ ಅನುಕೂಲ ಕಲ್ಪಿಸಲು ಆಡಳಿತ ವಿಫಲವಾಗಿದೆ ಎಂಬ ಆರೋಪ ಕೇಳಿಬಂದಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments