Select Your Language

Notifications

webdunia
webdunia
webdunia
webdunia

ಕಾವೇರಿ ವಿಚಾರದಲ್ಲಿ ಸರಕಾರದ ಬೇಜವಾಬ್ದಾರಿ ವರ್ತನೆ: ಯಡಿಯೂರಪ್ಪ ಕಿಡಿ

ಕಾವೇರಿ ವಿಚಾರ
ಬೆಂಗಳೂರು , ಮಂಗಳವಾರ, 20 ಸೆಪ್ಟಂಬರ್ 2016 (12:08 IST)
ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ಮೇಲುಸ್ತುವಾರಿ ಸಮಿತಿ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಬೇಜವಾಬ್ದಾರಿ ವರ್ತನೆಯಿಂದ ರಾಜ್ಯಕ್ಕೆ ಇಂತಹ ಪರಿಸ್ಥಿತಿ ಎದುರಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದೆ. ಯಾವುದೇ ಕಾರಣಕ್ಕೂ ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಹರಿಸಬಾರದು ಎನ್ನುವುದು ನಮ್ಮ ನಿಲುವು ಎಂದು ಸ್ಪಷ್ಟಪಡಿಸಿದ್ದಾರೆ. 
 
ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂಬಂಧಿಸಿದಂತೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಯಾವ ರೀತಿಯ ತೀರ್ಪು ಬರುತ್ತದೆ ಕಾದು ನೋಡೋಣ ಎಂದು ಹೇಳಿದರು. 
 
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ನಿನ್ನೆ ನವದೆಹಲಿಯಲ್ಲಿ ನಡೆದ ಕಾವೇರಿ ಮೇಲುಸ್ತುವಾರಿ ಸಮಿತಿಯ ಮುಂದೆ ಸರಕಾರದ ಕಾರ್ಯದರ್ಶಿ ಸಮರ್ಥವಾಗಿ ವಾದ ಮಂಡಿಸಿದ್ದರು, ಆದರೆ, ಕಾವೇರಿ ಮೇಲುಸ್ತುವಾರಿ ಸಮಿತಿ ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಹರಿಸುವಂತೆ ಸಲಹೆ ನೀಡಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕಾವೇರಿ ವಿಚಾರದಲ್ಲಿ ಬಿಟ್ಟಿ ಸಲಹೆ ನೀಡಿದ ಪದ್ಮಾವತಿ ರಮ್ಯಾ....