Webdunia - Bharat's app for daily news and videos

Install App

ಕೊರೊನಾ ತಡೆಗೆ ಫೀಲ್ಡಿಗೆ ಇಳಿದ ಪ್ರಾದೇಶಿಕ ಆಯುಕ್ತ

Webdunia
ಗುರುವಾರ, 19 ಮಾರ್ಚ್ 2020 (19:49 IST)
ಕೊರೊನಾ ವೈರಸ್ ತಡೆಗಟ್ಟೋಕೆ ಅಂತ ಇದೀಗ ಪ್ರಾದೇಶಿಕ ಆಯುಕ್ತರೇ ಫಿಲ್ಡಿಗೆ ಇಳಿದಿದ್ದಾರೆ.

ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಡಾ. ಎನ್.ವಿ.ಪ್ರಸಾದ ಅವರು ಕಲಬುರಗಿ ನಗರದ ಜನದಟ್ಟಣೆ ಪ್ರದೇಶಗಳಾದ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ,  ಶರಣಬಸವೇಶ್ವರ ದೇವಸ್ಥಾನ ಹಾಗೂ ಖಾಜಾ ಬಂದೇನವಾಜ್ ದರ್ಗಾ ಸೇರಿದಂತೆ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಕೊರೋನಾ ವೈರಸ್ ಹರಡದಂತೆ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿದರು.

ಕಲಬುರಗಿ ನಗರದ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಕೊರೋನಾ ವೈರಸ್ ಸೋಂಕು ಪರೀಕ್ಷೆಗೆ ಒಳಪಡಿಸುವುದನ್ನು ತೀವ್ರಗೊಳಿಸಬೇಕು ಹಾಗೂ ಥರ್ಮಲ್ ಸ್ಕ್ಯಾನ್ ವ್ಯವಸ್ಥೆಯನ್ನು ಕಡ್ಡಾಯಗೊಳಿಸಬೇಕೆಂದು ಕಲಬುರಗಿ ಜಿಲ್ಲಾಧಿಕಾರಿಗಳಿಗೆ ಹಾಗೂ ಪೊಲೀಸ್ ಉಪ ಆಯುಕ್ತರಿಗೆ ಸೂಚಿಸಿದ್ದಾರೆ. 

ಕಲಬುರಗಿ ಮುಖ್ಯ ಬಸ್‍ನಿಲ್ದಾಣದಲ್ಲಿ ಪ್ರತ್ಯೇಕವಾಗಿ ಒಳ ಮತ್ತು ಹೊರ ಪ್ರವೇಶ ದ್ವಾರಗಳನ್ನು ತಾತ್ಕಾಲಿಕವಾಗಿ ಸ್ಥಾಪಿಸಿಬೇಕೆಂದರು.

ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಜಿಮ್ಸ್) ಆಸ್ಪತ್ರೆಯಲ್ಲಿ ಐಸೋಲೇಷನ್ ವಾರ್ಡ್‍ನಲ್ಲಿರುವ ವ್ಯಕ್ತಿಗಳಿಗೆ ಪೂರೈಸುತ್ತಿರುವ ಊಟದ ವ್ಯವಸ್ಥೆ ಸುಧಾರಿಸಬೇಕು, ಪೌಷ್ಠಿಕ ಆಹಾರಕ್ಕೆ ಕ್ರಮ ಜರುಗಿಸಬೇಕು. ವೆಂಟಿಲೇಟರ್ ವ್ಯವಸ್ಥೆ ಅಧಿಕಗೊಳಿಸಬೇಕೆಂದು ಕಲಬುರಗಿ ಜಿಮ್ಸ್ ಆಸ್ಪತ್ರೆಯ ನಿರ್ದೇಶಕರಿಗೆ ತಿಳಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಈ ಕುರಿತು  ತೆಗೆದುಕೊಂಡ ಕ್ರಮಗಳ ಕುರಿತು ಅನುಪಾಲನಾ ವರದಿ ಸಲ್ಲಿಸಬೇಕೆಂದು ಅವರು ಸೂಚಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನನ್ನು ಹೊಗಳಿದ್ದನ್ನು ಬಿಜೆಪಿ ತಿರುಚಿದೆ, ಹಾಗೆ ಹೇಳಿಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಎಸ್ ಸಿ ಎಸ್ ಟಿ ಹಣ ಗ್ಯಾರಂಟಿಗೆ ಬಳಕೆ: ಹಣವಿಲ್ಲದಿದ್ದರೆ ಗ್ಯಾರಂಟಿ ಯಾಕೆ ಎಂದ ಆರ್ ಅಶೋಕ್

ಮಲ್ಲಿಕಾರ್ಜುನ ಖರ್ಗೆ ಪುತ್ರನ ಆರೋಗ್ಯ ಸ್ಥಿತಿ ಗಂಭೀರ

ಎಸ್ ಎಂ ಕೃಷ್ಣರಿಂದಾಗಿ ನನಗೆ ಸಿಎಂ ಸ್ಥಾನ ಸಿಗಲಿಲ್ಲ: ಮಲ್ಲಿಕಾರ್ಜುನ ಖರ್ಗೆ ಬೇಸರ

ಹೆಣ್ಮಕ್ಳು ಸೇಫ್ಟಿಗಾಗಿ ತಪ್ಪದೇ ಈ ಆಪ್ ಡೌನ್ ಲೋಡ್ ಮಾಡಿ

ಮುಂದಿನ ಸುದ್ದಿ
Show comments