Webdunia - Bharat's app for daily news and videos

Install App

5 ಬಾರಿ ಮರುಜನ್ಮ ಪಡೆದಿದ್ದೇನೆ, ನನ್ನ ಬಗ್ಗೆ ಕನಿಕರದಿಂದ ನೋಡಿ : ಕುಮಾರಸ್ವಾಮಿ

Webdunia
ಸೋಮವಾರ, 4 ಸೆಪ್ಟಂಬರ್ 2023 (10:52 IST)
ಬೆಂಗಳೂರು : ನಾನು 5 ಬಾರಿ ಮರುಜನ್ಮ ಪಡೆದಿದ್ದೇನೆ, ಈ ಬಾರಿ ಸ್ವಲ್ಪ ತಡ ಮಾಡಿದ್ದರೂ ಇವತ್ತು ನಿಮ್ಮ ಜೊತೆ ಮಾತನಾಡಲು ಆಗುತ್ತಿರಲಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಘಾತಕಾರಿ ಅನುಭವಗಳನ್ನ ಹಂಚಿಕೊಂಡಿದ್ದಾರೆ.

ಪಾರ್ಶ್ವವಾಯು ಸಮಸ್ಯೆಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹೆಚ್.ಡಿ ಕುಮಾರಸ್ವಾಮಿ ಅವರಿಂದು ಡಿಸ್ಚಾರ್ಜ್ ಆಗಿದ್ದಾರೆ. ಬಳಿಕ ಆಸ್ಪತ್ರೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತಂದೆ-ತಾಯಿ ಅಶೀರ್ವಾದದಿಂದ ನಾನು ಇಲ್ಲಿದ್ದೇನೆ, ನನಗೆ ಪುನರ್ಜನ್ಮ ಬಂದಿದೆ. ದೇವರ ದಯೆಯಿಂದ ಆರೋಗ್ಯವಾಗಿದ್ದೇನೆ ಎಂದು ಹೇಳಿದ್ದಾರೆ.

ಅಂದು ರಾತ್ರಿ 2 ಗಂಟೆ ವೇಳೆಗೆ ನನಗೆ ಎಚ್ಚರವಾಯ್ತು, ತಕ್ಷಣ ನನ್ನ ದೇಹದಲ್ಲಿ ಬದಲಾವಣೆ ಕಂಡುಬಂದಿತು, ಧ್ವನಿಯಲ್ಲೂ ಬದಲಾವಣೆ ಕಂಡುಬಂದಿತು. ಕೂಡಲೇ ಡಾ.ಮಂಜುನಾಥ್ ಹಾಗೂ ಡಾ.ಯತೀಶ್ ಅವರಿಗೆ ಕರೆ ಮಾಡಿ, ಬಿಡದಿಯ ತೋಟದಿಂದ ಇಪ್ಪತ್ತೇ ನಿಮಿಷಕ್ಕೆ ಆಸ್ಪತ್ರೆಗೆ ಬಂದೆ ಎಂದು ಆಕ್ಷಣದಲ್ಲಾದ ಕಹಿ ಅನುಭವವನ್ನ ಹಂಚಿಕೊಂಡಿದ್ದಾರೆ. 

ಮುಂದುವರಿದು.. ನಾನಿಂದು ರಾಜಕೀಯ ಬಿಟ್ಟು ಕೆಲ ಮಾತನ್ನ ಮಾತನಾಡಬೇಕಿದೆ, ನನಗಾದ ಜೀವನ್ಮರಣದ ಹೋರಾಟದ ಬಗ್ಗೆ ಹೇಳಬೇಕಿದೆ. ತುಂಬಾ ಕ್ಲಿಷ್ಟಕರ ಸನ್ನಿವೇಶ ಎದುರಿಸಿದ್ದೇನೆ, ಈ ರೀತಿಯ ಆರೋಗ್ಯ ಸಮಸ್ಯೆಯಾದಾಗ ಯಾರೂ ನಿರ್ಲಕ್ಷ್ಯ ಮಾಡಬಾರದು.. ಗೋಲ್ಡನ್ ಅವರ್ನಲ್ಲಿ ನಾವು ಚಿಕಿತ್ಸೆ ಪಡೆಯದೇ ಇದ್ರೇ ಜೀವನ ಪರ್ಯಂತ ಮತ್ತೊಬ್ಬರ ಮೇಲೆ ಅವಲಂಬಿತರಾಗಬೇಕಾಗುತ್ತೆ ಎಂದು ಎಚ್ಚರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ: ಪ್ರತಾಪಸಿಂಹ ಬೆನ್ನಲ್ಲೇ ಯತ್ನಾಳ್‌ ಆಕ್ಷೇಪ

ಆಗ ಬಾಯಿಮುಚ್ಚಿಕೊಂಡಿದ್ದವರು ಈಗ ಲಾಭಕ್ಕೆ ಕಾಯುತ್ತಿದ್ದಾರೆ: ಚಲುವರಾಯಸ್ವಾಮಿ ಆಕ್ರೋಶ

ಬುರುಡೆ ಪ್ರಕರಣದಲ್ಲಿ ಸಾಮಾನ್ಯಜ್ಞಾನ ಬಳಸಿದ್ದರೆ ಇಷ್ಟೊಂದು ರಾದ್ಧಾಂತ ಆಗುತ್ತಿರಲಿಲ್ಲ: ರಾಜಣ್ಣ

ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಕಸ್ಟಡಿಗೆ ಕಾಂಗ್ರೆಸ್​ ಶಾಸಕ ಕೆ.ಸಿ. ವೀರೇಂದ್ರ

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಹೇಗೆ ಸೂಕ್ತ ವ್ಯಕ್ತಿ ಆಗುತ್ತಾರೆ: ಪ್ರತಾಪಸಿಂಹ ಪ್ರಶ್ನೆ

ಮುಂದಿನ ಸುದ್ದಿ
Show comments