ಫೀ.ಮಾ.ಕಾರ್ಯಪ್ಪ ನಾಮಫಲಕ ಮರು ಸ್ಥಾಪನೆ

Webdunia
ಭಾನುವಾರ, 30 ಜನವರಿ 2022 (19:20 IST)
ನಗರದ ಫೀ.ಮಾ.ಕಾರ್ಯಪ್ಪ ವೃತ್ತದಲ್ಲಿ ನಾಪತ್ತೆಯಾಗಿದ್ದ ‘ಫೀ.ಮಾ.ಕೆ.ಎಂ.ಕಾರ್ಯಪ್ಪ’ ನಾಮಫಲಕವನ್ನು ಮರು ಸ್ಥಾಪಿಸಲಾಗಿದೆ.
ಸ್ಥಳಕ್ಕೆ ಭೇಟಿ ನೀಡಿದ್ದ ದೂರುದಾರರಾದ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ತೇಲಪಂಡ ಶಿವಕುಮಾರ್ ನಾಣಯ್ಯ ಹಾಗೂ ಕೊಡಗು ಪೀಪಲ್ಸ್ ಫೋರಂ ನ ಅಧ್ಯಕ್ಷ ಮಾದೇಟಿರ ತಿಮ್ಮಯ್ಯ ಫಲಕಕ್ಕೆ ಹೂವಿನ ಮಾಲೆ ಹಾಕಿ ಹರ್ಷ ವ್ಯಕ್ತಪಡಿಸಿದರು.
ಫೀ.ಮಾ.ಕಾರ್ಯಪ್ಪ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಪ್ರತಿಮೆಗೂ ಪುಷ್ಪ ನಮನ ಸಲ್ಲಿಸಿದರು. ನಂತರ ಮಾತನಾಡಿದ ಶಿವಕುಮಾರ್ ನಾಣಯ್ಯ, ನಾಮಫಲಕ ನಾಪತ್ತೆಯಾಗಿದ್ದ ಪ್ರಕರಣದ ಕುರಿತು ನಗರಸಭೆ ಹಾಗೂ ಪೊಲೀಸ್ ಇಲಾಖೆಯ ಗಮನ ಸೆಳೆಯಲಾಗಿತ್ತು. ಇದೀಗ ನೂತನ ನಾಮಫಲಕವನ್ನು ಅಳವಡಿಸಲಾಗಿದ್ದು, ಇದು ಸ್ವಾಗತಾರ್ಹ ಕ್ರಮವಾಗಿದೆ ಎಂದರು.
ಈಗಾಗಲೇ ಪೊಲೀಸರಿಗೆ ದೂರು ನೀಡಿರುವುದರಿಂದ ನಾಮಫಲಕ ನಾಪತ್ತೆಗೆ ಕಾರಣ ಏನು ಎನ್ನುವುದನ್ನು ಸಾರ್ವಜನಿಕವಾಗಿ ಸ್ಪಷ್ಟಪಡಿಸಿದರೆ ಗೊಂದಲ ನಿವಾರಣೆಯಾಗಲಿದೆ. ಅಲ್ಲದೆ ಇನ್ನು ಮುಂದೆ ಈ ರೀತಿಯ ಪ್ರಕರಣಗಳು ನಡೆಯದಂತೆ ಜನ ಜಾಗೃತಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಪ್ಪ ವೃತ್ತವನ್ನು ವೈಜ್ಞಾನಿಕ ರೂಪದಲ್ಲಿ ನಿರ್ಮಿಸಬೇಕೆಂದು ಶಿವಕುಮಾರ್ ನಾಣಯ್ಯ ಇದೇ ಸಂದರ್ಭ ಒತ್ತಾಯಿಸಿದರು.
ಪ್ರಮುಖರಾದ ಒಡಿಯಂಡ ನವೀನ್ ತಿಮ್ಮಯ್ಯ, ಮಾಜಿ ಯೋಧ ಎಸ್.ಸುಧೀರ್ ಮತ್ತಿತರರು ಹಾಜರಿದ್ದು ಕಾರ್ಯಪ್ಪ ಅವರಿಗೆ ಗೌರವ ಅರ್ಪಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ನ್ಯಾಷನಲ್ ಹೆರಾಲ್ಡ್‌ ಪ್ರಕರಣ, ಸೋನಿಯಾ, ರಾಹುಲ್ ಗಾಂಧಿಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments