Select Your Language

Notifications

webdunia
webdunia
webdunia
webdunia

ಪ್ರೇಮ ನಿರಾಕರಣೆ, ಮಂಗಳಮುಖಿಗೆ ಚಾಕು ಇರಿದ ಯುವಕ, ಏನಿದು ಲವ್‌ಸ್ಟೋರಿ

ಪ್ರೇಮ ನಿರಾಕರಣೆ, ಮಂಗಳಮುಖಿಗೆ ಚಾಕು ಇರಿದ ಯುವಕ, ಏನಿದು ಲವ್‌ಸ್ಟೋರಿ

Sampriya

ತುಮಕೂರು , ಗುರುವಾರ, 29 ಆಗಸ್ಟ್ 2024 (17:31 IST)
ತುಮಕೂರು: ಮಂಗಳಮುಖಿ ತನ್ನ ಪ್ರೀತಿ ನಿರಾಕರಿಸಿದ್ದಕ್ಕೆ ಕೋಪಗೊಂಡ ಯುವಕ ಆಕೆ ಮೇಲೆ ಹಲ್ಲೆ ಮಾಡಿದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದ ಕೋಟೆ ಪ್ರದೇಶದಲ್ಲಿ ನಡೆದಿದೆ.

ಹಲ್ಲೆಗೊಳಗಾದ ಮಂಗಳಮುಖಿಯನ್ನು ಹನೀಷಾ ಎಂದು ಗುರುತಿಸಲಾಗಿದೆ. ಹಲ್ಲೆ ಮಾಡಿದ ಆರೋಪಿ ಮಂಡ್ಯದ ಆದಿಲ್. ಕಳೆದ ಕೆಲ ತಿಂಗಳಿನಿಂದ ಮಂಗಳಮುಖಿ ಹನೀಷಾಳನ್ನು ಆದಿಲ್  ಪ್ರೀತಿಸುತ್ತಿದ್ದ ಎನ್ನಲಾಗಿದೆ.

ಇನ್ನೂ ಹನೀಷಾ ‌ಲಿಂಗತ್ವ ಅಲ್ಪಸಂಖ್ಯಾತರ ಕಾರ್ಯಕ್ರಮಗಳ ನಿಮಿತ್ತ ಪರ ಊರುಗಳಿಗೆ ಆಗಾಗ ಹೋಗುತ್ತಿದ್ದರು. ಇದನ್ನು ಸಹಿಸಿಕೊಳ್ಳಲಾಗದ ಆದಿಲ್ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾನೆ. ಇದರಿಂದ ಬೇಸತ್ತ ಹನೀಷಾ ಆತನ ಪ್ರೇಮವನ್ನು ನಿರಾಕರಿಸಿದ್ದಾಳೆ. ಇದರಿಂದ ಕೋಪಗೊಂಡ ಆದಿಲ್ ಆಕೆಯ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ.

ನಿನ್ನೆ ಇವರಿಬ್ಬರ ಜಗಳವಾಗಿದ್ದು, ಈ ಸಂದರ್ಭದಲ್ಲಿ ಸಿಟ್ಟಿನಲ್ಲಿ ಆದಿಲ್‌ ಚಾಕುವಿನಿಂದ ಇರಿದಿದ್ದಾನೆ. ಗಾಯಾಳು ಹನೀಷಾಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

MUDA Scam, ಸಿಎಂ ಸಿದ್ದರಾಮಯ್ಯಗೆ ಮತ್ತೇ ಎರಡು ದಿನ ರಿಲೀಫ್